July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಬೆಳ್ತಂಗಡಿ: ಮಾನವನ ಉನ್ನತ ಜೀವನಕ್ಕೆ ಪರಿಸರ ಪೂರಕವಾಗಿರುವಂತೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು ಎಂದು ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಪ್ರಜ್ವಲಾ ಡಿ ಆರ್ ಹೇಳಿದರು.


ಅವರು ವಾಣಿ ಪದವಿಪೂರ್ವ ಕಾಲೇಜಿನ ಪರಿಸರ ಸಂಘದ ಆಶ್ರಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಇಂದಿನ ಜಾಗತಿಕ ವಿದ್ಯಮಾನಗಳು, ಅಭಿವೃದ್ಧಿ ಪೂರಕ ಯೋಜನೆಗಳು ಪರಿಸರವನ್ನು ಕಡೆಗಣಿಸಿವೆ. ಇದು ಭವಿಷ್ಯದ ಜನಾಂಗಕ್ಕೆ ಮಾರಕವಾಗಲಿದೆ. ಜ್ಞಾನಿ ಎನಿಸಿಕೊಂಡ ಮಾನವನಿಂದಲೇ ಪರಿಸರವು ಹಾನಿಗೆ ಒಳಗಾಗುತ್ತಿರುವುದು ವಿಪರ್ಯಾಸವಾಗಿದೆ. ಸಂಪನ್ಮೂಲಗಳ ಸಮರ್ಪಕ ಬಳಕೆಯಿಂದ ಪ್ರಕೃತಿಯ ಉಳಿವು ಸಾಧ್ಯ. ಈ ನಿಟ್ಟಿನಲ್ಲಿ ಹಸಿರು ಭವಿಷ್ಯಕ್ಕಾಗಿ ನಮ್ಮ ಪಯಣ ನಿರಂತರವಾಗಬೇಕಿದೆ ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಡಿ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ, ಪರಿಸರ ಸಂಘದ ಸಂಯೋಜಕರಾದ ಶ್ರೀಮತಿ ದೀಕ್ಷಾ , ಕುಮಾರಿ ಸ್ವಾತಿ ಉಪಸ್ಥಿತರಿದ್ದರು.
ಕುಮಾರಿ ವಿಭಾ ಸ್ವಾಗತಿಸಿದರು. ಅನ್ವಿತ್ ಧನ್ಯವಾದವಿತ್ತರು. ಕುಮಾರಿ ಸ್ಪೂರ್ತಿ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿಯಲ್ಲಿ ಸಿಂಧೂರ ಟ್ರೇಡರ್ಸ್ ಶುಭಾರಂಭ

Suddi Udaya

ಜ.14-23: ಸಾವಿರ ವರ್ಷಗಳ ಇತಿಹಾಸವಿರುವ ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ-ಮಹಾರಥೋತ್ಸವ

Suddi Udaya

ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿ ಆಯ್ಕೆ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಪ್ರಾರ್ಥನಾರಿಗೆ ಸನ್ಮಾನ

Suddi Udaya

ಗ್ರಾಮಸ್ಥರ ಮನೆಗಳ ಶುಚಿತ್ವಕ್ಕೆ ಕಂಟಕವಾದ ಸ್ಥಳೀಯ ಕೋಳಿಸಾಕಾಣಿಕೆ: ಅಗತ್ಯ ಕ್ರಮಕ್ಕೆ ಸ್ಥಳೀಯರ ಒತ್ತಾಯ

Suddi Udaya

ಬೆಳಾಲು ಪ್ಯಾಕ್ಸ್: ಆರ್ಥಿಕ ಅವ್ಯವಹಾರ ಪ್ರಕರಣಎರಡನೇ ಆರೋಪಿ ಪ್ರಶಾಂತ್ ಬಂಧನ

Suddi Udaya
error: Content is protected !!