July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಚಿತ ಬಿದಿರು ಸಸಿಗಳ ವಿತರಣೆ; ಅರ್ಜಿ ಆಹ್ವಾನ

ಬೆಳ್ತಂಗಡಿ: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಂಗಳೂರು ಇವರು ಸಿಎಸ್ಆರ್ ನಿಧಿಯಲ್ಲಿ ಬಿದಿರು ಬೆಳೆಸುವ ಯೋಜನೆ ಹಾಕಿಕೊಂಡಿದ್ದು, ಪ್ರಾರಂಭಿಕ ಹಂತದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 25 ಸಾವಿರ ಬಿದಿರು ಸಸಿಗಳನ್ನು ಉಚಿತವಾಗಿ ರೈತರಿಗೆ ವಿತರಿಸಲಿದ್ದಾರೆ.

ಈ ಯೋಜನೆಯು ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಂಗಳೂರು ಹಾಗೂ ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ (ನಿ.) ಉಜಿರೆ ಇವರು ಜಂಟಿಯಾಗಿ ಅನುಷ್ಠಾನ ಮಾಡುವ ಯೋಜನೆಯಾಗಿದ್ದು ಬಿದಿರು ಕೃಷಿಯಲ್ಲಿ ಆಸಕ್ತ ಕೃಷಿಕರು ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಮುಖ್ಯ ಕಚೇರಿ, ಉಜಿರೆಯಲ್ಲಿ ಈ ಬಗ್ಗೆ ಅವಶ್ಯಕ ಅರ್ಜಿಯನ್ನು ಜೂ.20 ರ ಮೊದಲು ಸಲ್ಲಿಸಬೇಕಾಗಿರುತ್ತದೆ.

ಈ ಯೋಜನೆಯಲ್ಲಿ ಕನಿಷ್ಟ 50 ಗಿಡ ಹಾಗೂ ಗರಿಷ್ಟ 600 ಗಿಡಗಳನ್ನು ಉಚಿತವಾಗಿ ನೀಡಲಾಗುವುದು. ಉಚಿತ ವಿತರಿಸಿದ ಬಿದಿರು ಗಿಡಗಳನ್ನು ಕಡ್ಡಾಯವಾಗಿ ನಾಟಿಮಾಡಬೇಕು ಹಾಗೂ ಬಿದಿರು ಸೊಸೈಟಿ ಆಫ್ ಇಂಡಿಯಾ ಇಲ್ಲಿನ ಪ್ರತಿನಿಧಿಗೆ ಗಿಡದ ಬೆಳವಣಿಗೆ ಬಗ್ಗೆ ಮಾಹಿತಿ ನೀಡುವುದು ಕಡ್ಡಾಯವಾಗಿರುತ್ತದೆ. ಮುಂದಿನ ಎರಡು ವರ್ಷ ಉತ್ತಮವಾಗಿ ಬೆಳೆಸಿದ ಸಸಿಗಳಿಗೆ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿ ನೀಡಲು ಇಚ್ಚಿಸುವ ರೈತರು ತಮ್ಮ ಸ್ವವಿವರದೊಂದಿಗೆ ಬಿದಿರು ಕೃಷಿ ಮಾಡಲಿಚ್ಚಿಸುವ ಜಾಗದ ವಿವರ ಮತ್ತು ಆಧಾರ್ ಪ್ರತಿಯೊಂದಿಗೆ ಕಚೇರಿ ಸಮಯದಲ್ಲಿ ಸಂಘವನ್ನು ಸಂಪರ್ಕಿಸಬೇಕಾಗಿ ತಿಳಿಸಿದೆ.

Related posts

ಕನ್ಯಾಡಿ II ಸ. ಉ. ಹಿ.ಪ್ರಾ. ಶಾಲೆಯಲ್ಲಿ ನೂತನ ಎಲ್‌ಕೆಜಿ ತರಗತಿ ಶುಭಾರಂಭ

Suddi Udaya

ಪಟ್ರಮೆ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಪ್ರಾರಂಭ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆ ವಿರುದ್ಧ: ಎಸ್ಡಿಪಿಐ ಮುಖಂಡರಿಂದ ಸಮಸ್ಯೆ ಬಗೆಹರಿಸಲು ಮನವಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಹಳೆ ವಿದ್ಯಾರ್ಥಿನಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಪಾಸ್ಕ ಕಾಲದ ನಲವತ್ತನೆ ಶುಭ ಶುಕ್ರವಾರದ ಶಿಲುಬೆಯ ಹಾದಿ ದೇವಗಿರಿಯಲ್ಲಿ ಸಂಪನ್ನ

Suddi Udaya

ಬಂದಾರು ಗ್ರಾ.ಪಂ. ಉದ್ಯೋಗ ಖಾತರಿ ಯೋಜನೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪ್ರಶಸ್ತಿ ಸ್ವೀಕಾರ

Suddi Udaya
error: Content is protected !!