September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಚಿತ ಬಿದಿರು ಸಸಿಗಳ ವಿತರಣೆ; ಅರ್ಜಿ ಆಹ್ವಾನ

ಬೆಳ್ತಂಗಡಿ: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಂಗಳೂರು ಇವರು ಸಿಎಸ್ಆರ್ ನಿಧಿಯಲ್ಲಿ ಬಿದಿರು ಬೆಳೆಸುವ ಯೋಜನೆ ಹಾಕಿಕೊಂಡಿದ್ದು, ಪ್ರಾರಂಭಿಕ ಹಂತದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 25 ಸಾವಿರ ಬಿದಿರು ಸಸಿಗಳನ್ನು ಉಚಿತವಾಗಿ ರೈತರಿಗೆ ವಿತರಿಸಲಿದ್ದಾರೆ.

ಈ ಯೋಜನೆಯು ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಂಗಳೂರು ಹಾಗೂ ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ (ನಿ.) ಉಜಿರೆ ಇವರು ಜಂಟಿಯಾಗಿ ಅನುಷ್ಠಾನ ಮಾಡುವ ಯೋಜನೆಯಾಗಿದ್ದು ಬಿದಿರು ಕೃಷಿಯಲ್ಲಿ ಆಸಕ್ತ ಕೃಷಿಕರು ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಮುಖ್ಯ ಕಚೇರಿ, ಉಜಿರೆಯಲ್ಲಿ ಈ ಬಗ್ಗೆ ಅವಶ್ಯಕ ಅರ್ಜಿಯನ್ನು ಜೂ.20 ರ ಮೊದಲು ಸಲ್ಲಿಸಬೇಕಾಗಿರುತ್ತದೆ.

ಈ ಯೋಜನೆಯಲ್ಲಿ ಕನಿಷ್ಟ 50 ಗಿಡ ಹಾಗೂ ಗರಿಷ್ಟ 600 ಗಿಡಗಳನ್ನು ಉಚಿತವಾಗಿ ನೀಡಲಾಗುವುದು. ಉಚಿತ ವಿತರಿಸಿದ ಬಿದಿರು ಗಿಡಗಳನ್ನು ಕಡ್ಡಾಯವಾಗಿ ನಾಟಿಮಾಡಬೇಕು ಹಾಗೂ ಬಿದಿರು ಸೊಸೈಟಿ ಆಫ್ ಇಂಡಿಯಾ ಇಲ್ಲಿನ ಪ್ರತಿನಿಧಿಗೆ ಗಿಡದ ಬೆಳವಣಿಗೆ ಬಗ್ಗೆ ಮಾಹಿತಿ ನೀಡುವುದು ಕಡ್ಡಾಯವಾಗಿರುತ್ತದೆ. ಮುಂದಿನ ಎರಡು ವರ್ಷ ಉತ್ತಮವಾಗಿ ಬೆಳೆಸಿದ ಸಸಿಗಳಿಗೆ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿ ನೀಡಲು ಇಚ್ಚಿಸುವ ರೈತರು ತಮ್ಮ ಸ್ವವಿವರದೊಂದಿಗೆ ಬಿದಿರು ಕೃಷಿ ಮಾಡಲಿಚ್ಚಿಸುವ ಜಾಗದ ವಿವರ ಮತ್ತು ಆಧಾರ್ ಪ್ರತಿಯೊಂದಿಗೆ ಕಚೇರಿ ಸಮಯದಲ್ಲಿ ಸಂಘವನ್ನು ಸಂಪರ್ಕಿಸಬೇಕಾಗಿ ತಿಳಿಸಿದೆ.

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿಂಶತಿ ಸಂಭ್ರಮ ಹಾಗೂ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆಯಲ್ಲಿ ಎನ್ ಎಸ್ ಯು ಐ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ

Suddi Udaya

ಬೆಳ್ತಂಗಡಿ ನ್ಯಾಯವಾದಿ ಭಗೀರಥ ಜಿ ರವರ ನೋಟರಿ ಕಚೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಕನ್ಯಾಡಿ I ಗ್ರಾಮದ ಚೆನ್ನಲ್ಲಿಕೆ ಮನೆಯ ಸಂಜೀವ ನಾಯ್ಕ್ ನಿಧನ

Suddi Udaya

ಶಿವಮೊಗ್ಗದಲ್ಲಿ ಬಿಎಮ್.ಎಸ್ ಕುಟುಂಬ ಸಂಗಮ: ದ.ಕ. ಜಿಲ್ಲೆಯಿಂದ 200ಕ್ಕೂ ಹೆಚ್ಚು ಕಾರ್ಯಕರ್ತರ ಭಾಗಿ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಿಗೆ ನೆಲ್ಯಾಡಿಯ ವಿವಿಧ ಸಂಘಟನೆಗಳಿಂದ ಗೌರವ ಅರ್ಪಣೆ

Suddi Udaya
error: Content is protected !!