26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಾಜೂರು ಶಿಕ್ಷಣ ಸಂಸ್ಥೆಯಲ್ಲಿ “ಅಲೀಫ್ ಡೇ” ಸಮಾರಂಭ

ಬೆಳ್ತಂಗಡಿ: ಮುಸ್ಲಿಂ ಸಮುದಾಯ ಶೈಕ್ಷಣಿಕವಾಗಿ ಹಿಂದೆ ಇದ್ದ ಕಾಲವೊಂದಿತ್ತು. ಇದೀಗ ಪ್ರಗತಿ ಸಾಧಿಸುತ್ತಿದ್ದು ಕಾಜೂರು ಕೂಡ ಎಲ್ಲ ರೀತಿಯಲ್ಲಿ ಶೈಕ್ಷಣಿಕ ಪ್ರಗತಿ ಸಾಧಿಸುತ್ತಿರುವುದು ಆಶಾದಾಯಕ ಬೆಳವಣಿಗೆ ಎಂದು ಕಾಜೂರು ಆಡಳಿತ ಸಮಿತಿ ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟಕೋಯ ತಂಙಳ್ ಕುಂಬೋಳ್ ಹೇಳಿದರು.

ರಹ್ಮಾನಿಯಾ ಎಜ್ಯುಕೇಶನ್ ಟ್ರಸ್ಟ್ ನ ಸಮೂಹ ಶಿಕ್ಷಣ ಸಂಸ್ಥೆಗಳಾದ ‘ರಾಹ ಇಂಗ್ಲೀಷ್‌ ಮೀಡಿಯಂ ಪಬ್ಲಿಕ್ ಸ್ಕೂಲ್’ , ರಹ್ಮಾನಿಯಾ ಶರೀಅತ್ ಮತ್ತು ಮಹಿಳಾ ಪಿ‌‌.ಯು ಕಾಲೇಜು, ರಹ್ಮಾನಿಯಾ ಪಳ್ಳಿದರ್ಸ್, ರಹ್ಮಾನಿಯಾ ಪ್ರೌಢ ಶಾಲೆ ಇವುಗಳ ಪ್ರಾರಂಭೋತ್ಸವ ಹಾಗೂ ಅಲೀಫ್ ಡೇ ಇದನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಜೂರು ಆಡಳಿತ ಮಂಡಳಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.
ಪ್ರಧಾನ ಅತಿಥಿಯಾಗಿದ್ದ ವಕ್ಫ್ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಮಾತನಾಡಿ, ಇಸ್ಲಾಂ ಧರ್ಮ ಶಿಕ್ಷಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿದೆ‌. ಅದನ್ನು ಕಾಜೂರಿನ ಆಡಳಿತ ಸಮಿತಿ ಯಥಾ ಪಾಲಿಸುತ್ತಿದೆ. ಇಲ್ಲಿನ ಆಡಳಿತ ಮಂಡಳಿ ಶ್ರಮಪಟ್ಟು ಸರಕಾರದ ಬೆನ್ನುಹತ್ತಿ ಅನುದಾನಗಳನ್ನು ಇಲ್ಲಿಗೆ ತಂದಿರುವುದು ಇತರ ಜಮಾಅತ್ ಗಳಿಗೆ ಮಾದರಿಯಾದ ಕಾರ್ಯ ಎಂದರು.
ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲ ಸಯ್ಯಿದ್ ಕಾಜೂರು ತಂಙಳ್ ದುಆ ನಡೆಸಿದರು. ಶಿಕ್ಷಣ ತಜ್ಞ ಕೆ.ಎಂ ಅಬೂಬಕ್ಕರ್ ಸಿದ್ದೀಕ್ ಮೋಂಟುಗೊಳಿ ಶುಭಕೋರಿದರು.


ಸಮಾರಂಭದಲ್ಲಿ ಕಾಜೂರು ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ, ವಕ್ಫ್ ಜಿಲ್ಲಾ ಸಲಹಾ ಸಮಿತಿ ಸದಸ್ಯ ಜೆ‌.ಹೆಚ್ ಅಬೂಬಕ್ಕರ್ ಸಿದ್ದೀಕ್, ಕೋಶಾಧಿಕಾರಿ ಕೆ.ಎಮ್ ಕಮಾಲ್, ಉಪಾಧ್ಯಕ್ಷರುಗಳಾದ ಬದ್ರುದ್ದೀನ್ ಮತ್ತು ಅಬ್ದುಲ್ ರಹಿಮಾನ್, ಮಾಜಿ ಅಧ್ಯಕ್ಷರುಗಳಾದ ಕೆ‌.ಯು ಉಮರ್ ಸಖಾಫಿ, ಬಿ.ಎ ಯೂಸುಫ್ ಶರೀಫ್ ಮತ್ತು ಪಿ‌.ಎ ಮುಹಮ್ಮದ್, ಕಿಲ್ಲೂರು ಮಸ್ಜಿದ್ ಅಧ್ಯಕ್ಷ ಅಬ್ದುಲ್ ಅಝೀಝ್ ಝಹುರಿ, ಮಾಜಿ ಅಧ್ಯಕ್ಷ ಎಂ.ಎ ಕಾಸಿಂ ಮಲ್ಲಿಗೆಮನೆ, ಕೋಶಾಧಿಕಾರಿ ಅಬೂಬಕ್ಕರ್ ಮಲ್ಲಿಗೆ, ಗುತ್ತಿಗೆದಾರ ವಝೀರ್ ಬಂಗಾಡಿ, ಸತ್ತಾರ್ ಸಾಹೇಬ್ ಬಂಗಾಡಿ, ವಕ್ಫ್ ಜಿಲ್ಲಾ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಮೊಗರ್ಪಣೆ, ಮುಹಮ್ಮದ್ ರಫಿ, ಸ್ಥಳೀಯ ಮೊಹಲ್ಲಾಗಳ ಅಧ್ಯಕ್ಷರುಗಳಾದ ಕೆ.ಎಂ ಅಬೂಬಕ್ಕರ್ ಕುಕ್ಕಾವು, ಉಸ್ಮಾನ್ ಪಗರೆ ಜಿ ನಗರ, ಇಸ್ಮಾಯಿಲ್ ಮುಸ್ಲಿಯಾರ್ ದಿಡುಪೆ, ಆರ್‌ಡಿ‌ಎಸ್ ಅಧ್ಯಕ್ಷ ಶರೀಫ್ ಹೈಟೆಕ್ ಇವರು ಉಪಸ್ಥಿತರಿದ್ದರು.
ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಕಾರ್ಯಕ್ರಮ ನಿರೂಪಿಸಿದರು‌‌. ಶಾಲಾ ಮುಖ್ಯೋಪಾಧ್ಯಾಯಿನಿ ಶಂಶಾದ್ ಶರೀಫ್ ಬೆರ್ಕಳ ವಂದಿಸಿದರು.

Related posts

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಪುತ್ತಿಲ ನಿವಾಸಿ ಸುನಂದಾರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ ಹಸ್ತಾಂತರ

Suddi Udaya

ಮಡಂತ್ಯಾರು: ವಸಂತ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ಐಟಿ ಕ್ಲಬ್ ನ ವತಿಯಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಲಾಯಿಲ: ಗಂಗಮ್ಮ ಪೂಜಾರಿ ನಿಧನ

Suddi Udaya

ಸೂರ್ಯತ್ತಾವು ಶ್ರೀ ದುರ್ಗಾ ಜನರಲ್ ಸ್ಟೋರ್ ಹಾಗೂ ಚಿಕನ್ ಸೆಂಟರ್ ಶುಭಾರಂಭ

Suddi Udaya

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!