24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಪ್ರತಿ ವರ್ಷದಂತೆ ಟ್ರಸ್ಟ್ ಕಚೇರಿಯಲ್ಲಿ ಜೂನ್ 5ರಂದು ಆಚರಿಸಲಾಯಿತು.

ದ.ಕ. ಪರಿಸರಾಸ್ತಕರ ಒಕ್ಕೂಟದ ಮಾಜಿ ಅಧ್ಯಕ್ಷ, ನಾಟಿ ವೈದ್ಯ ಐ. ಕುಶಾಲಪ್ಪ ಗೌಡ ಗಿಡಮೂಲಿಕೆಗಳ ಔಷಧೀಯ ಗುಣಗಳ ಕುರಿತು ಮಾಹಿತಿ ನೀಡಿ, ಮನೆಗೆ ಬೇಕಾದ ತರಕಾರಿಯನ್ನು ಮನೆಯ ಸುತ್ತ ಕಡಿಮೆ ಸ್ಥಳದಲ್ಲಿ ಬೆಳೆಸುವ ಸರಳ ವಿಧಾನ ವಿವರಿಸಿದರು.

ಟ್ರಸ್ಟ್‌ನ ಉಪಾಧ್ಯಕ್ಷೆ, ಕರಾವಳಿ ಮಹಿಳಾ ಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷೆ ವಿದ್ಯಾ ನಾಯಕ್ ವಿಶ್ವ ಪರಿಸರ ದಿನಾಚರಣೆಯ ಈ ವರ್ಷದ ಥೀಮ್ ಭೂಮಿ ಪುನಃ ಸ್ಥಾಪನೆ, ಮರುಭೂಮಿ ಮತ್ತು ಬರ ಸ್ಥಿತಿ ಸ್ಥಾಪಕತ್ವ ಇದರ ಬಗ್ಗೆ ಮಾತನಾಡಿದರು.

ಟ್ರಸ್ಟ್‌ನ ಅಧ್ಯಕ್ಷ ಕೆ. ಸೋಮನಾಥ ನಾಯಕ್ ಸಭಾಧ್ಯಕ್ಷತೆ ವಹಿಸಿದ್ದರು.

ಟ್ರಸ್ಟಿ ಸದಾಶಿವ ಹೆಗ್ಡೆ ಸ್ವಾಗತಿಸಿದರು. ದಲಿತ ಮುಖಂಡ ಎಂ.ಬಿ. ಕರಿಯ ವಂದಿಸಿದರು. ಟ್ರಸ್ಟ್ ಮೆನೇಜರ್ ಬಾಬು ಎ. ಕಾರ್ಯಕ್ರಮ ನಿರೂಪಿಸಿದರು.

Related posts

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ: ಪುಟಾಣಿ ಮಕ್ಕಳು ಪ್ರೀತಿಯ ಗುರುಗಳಿಗೆ ಪೆನ್ನು,ಹೂ ನೀಡಿ ಗೌರವ ಸಲ್ಲಿಕೆ

Suddi Udaya

ಬಳಂಜ: ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹರೀಶ್ ವೈ ಆಯ್ಕೆ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ಜಾರಿಗೆ ಬೈಲು: ಅಕ್ರಮ ಗೋ ಸಾಗಟ :ರಾಷ್ಟ್ರೀಯ ಹಿಂದೂ ಜಾಗರಣೆ ವೇದಿಕೆ ಕಾರ್ಯಕರ್ತರಿಂದ ಕಾರ್ಯಾಚರಣೆ

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ನೂತನ ವಿಜಯಗೋಪುರ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ಸನ್ನಿಧಿ ಎಸ್ ಹೆಗ್ಡೆ ಹಾಗೂ ದಿಯಾ ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ 7ನೇ ಸ್ಥಾನ

Suddi Udaya
error: Content is protected !!