25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಪ್ರತಿ ವರ್ಷದಂತೆ ಟ್ರಸ್ಟ್ ಕಚೇರಿಯಲ್ಲಿ ಜೂನ್ 5ರಂದು ಆಚರಿಸಲಾಯಿತು.

ದ.ಕ. ಪರಿಸರಾಸ್ತಕರ ಒಕ್ಕೂಟದ ಮಾಜಿ ಅಧ್ಯಕ್ಷ, ನಾಟಿ ವೈದ್ಯ ಐ. ಕುಶಾಲಪ್ಪ ಗೌಡ ಗಿಡಮೂಲಿಕೆಗಳ ಔಷಧೀಯ ಗುಣಗಳ ಕುರಿತು ಮಾಹಿತಿ ನೀಡಿ, ಮನೆಗೆ ಬೇಕಾದ ತರಕಾರಿಯನ್ನು ಮನೆಯ ಸುತ್ತ ಕಡಿಮೆ ಸ್ಥಳದಲ್ಲಿ ಬೆಳೆಸುವ ಸರಳ ವಿಧಾನ ವಿವರಿಸಿದರು.

ಟ್ರಸ್ಟ್‌ನ ಉಪಾಧ್ಯಕ್ಷೆ, ಕರಾವಳಿ ಮಹಿಳಾ ಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷೆ ವಿದ್ಯಾ ನಾಯಕ್ ವಿಶ್ವ ಪರಿಸರ ದಿನಾಚರಣೆಯ ಈ ವರ್ಷದ ಥೀಮ್ ಭೂಮಿ ಪುನಃ ಸ್ಥಾಪನೆ, ಮರುಭೂಮಿ ಮತ್ತು ಬರ ಸ್ಥಿತಿ ಸ್ಥಾಪಕತ್ವ ಇದರ ಬಗ್ಗೆ ಮಾತನಾಡಿದರು.

ಟ್ರಸ್ಟ್‌ನ ಅಧ್ಯಕ್ಷ ಕೆ. ಸೋಮನಾಥ ನಾಯಕ್ ಸಭಾಧ್ಯಕ್ಷತೆ ವಹಿಸಿದ್ದರು.

ಟ್ರಸ್ಟಿ ಸದಾಶಿವ ಹೆಗ್ಡೆ ಸ್ವಾಗತಿಸಿದರು. ದಲಿತ ಮುಖಂಡ ಎಂ.ಬಿ. ಕರಿಯ ವಂದಿಸಿದರು. ಟ್ರಸ್ಟ್ ಮೆನೇಜರ್ ಬಾಬು ಎ. ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್.ಡಿ.ಎಂ ಕಾಲೇಜು : ಮ್ಯಾರಥನ್ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ

Suddi Udaya

ಅಭ್ಯಾಸ್ ಕಾಲೇಜಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸ್ಪಾರ್ಕ್ ಪರೀಕ್ಷಾಪೂರ್ವ ಸಿದ್ದತಾ ಕಾರ್ಯಗಾರ

Suddi Udaya

ಸಂಪೂರ್ಣ ಹದಗೆಟ್ಟ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ: ಅನುದಾನ ಬಿಡುಗಡೆಗೊಳಿಸುವಂತೆ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ

Suddi Udaya

ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಮಂಗಳೂರು ಕೆ.ಎಂ.ಎಫ್ ಅಧ್ಯಕ್ಷ ರವಿರಾಜ್ ಹೆಗ್ಡೆ ಭೇಟಿ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಸ್ಪರ್ಧಾತ್ಮಕ ಪರೀಕ್ಷಾ ಕಾರ್ಯಾಗಾರ”

Suddi Udaya
error: Content is protected !!