May 6, 2026
Uncategorized

ಜೂ.12 ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

ಬೆಳ್ತಂಗಡಿ: ಜೂ.12 ರಂದು ಬೆಳಿಗ್ಗೆ 11 ಗಂಟೆಯಿಂದ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ ಜರುಗಲಿದೆ.

ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು,ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸುತ್ತಾರೆ ಸರಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ.

ಅರ್ಜಿದಾರರು ನಮೂನೆ 1 ಹಾಗೂ II ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಕಛೇರಿಗೆ ಅಥವಾ ನೇರವಾಗಿ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ.ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬಹುದು ಎಂದು ಮಂಗಳೂರು ಲೋಕಾಯುಕ್ತಪೊಲೀಸ್ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.

Related posts

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಸವಣಾಲು ದೇವಕಿ ಆಚಾರ್ಯ ಹೃದಯಘಾತದಿಂದ ನಿಧನ

Suddi Udaya

ಸಾಧನೆಗೆ ಪ್ರಯತ್ನವೇ ಮುಖ್ಯ: ರುಡ್ಸೆಟ್ ಸಿಸಿ ಕ್ಯಾಮರ ಆಳವಡಿಕೆ ಮತ್ತು ದುರಸ್ತಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮೋಹನ್ ಕುಮಾರ್

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಬಿಲ್‌ಕಲೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ಲಕ್ಷ್ಮೀನಾರಾಯಣರಿಗೆ ಬೀಳ್ಕೊಡುಗೆ

Suddi Udaya

ಇಂದಬೆಟ್ಟು-ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ಯುವ ಸಂಘಟನೆಯಿಂದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಶ್ರಮದಾನ

Suddi Udaya

ರಮ್ಜಾನ್ ಹಬ್ಬದ ಪ್ರಯುಕ್ತ ವೇಣೂರು ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ

Suddi Udaya
error: Content is protected !!