26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಮುಖಂಡ ರಾಜೇಶ್ ಕೊಲೆ ಯತ್ನ ಪ್ರಕರಣ: ಆರೋಪಿ ಕುಶಾಲಪ್ಪ ಗೌಡ ಬಂಧನ

ಬೆಳ್ತಂಗಡಿ : ಬಿಜೆಪಿ ಬೆಳ್ತಂಗಡಿ ತಾಲೂಕು ಮಂಡಲದ ಎಸ್ ಟಿ ಮೋರ್ಚಾದ ಅಧ್ಯಕ್ಷ, ರಾಜೇಶ್ ಎಂ.ಕೆ(33) ಮೇಲೆ ಜೂ.4 ರಂದು ರಾತ್ರಿ ಕೊಲೆ ಯತ್ನ ನಡೆಸಿದ ಆರೋಪಿ ಕುಶಾಲಪ್ಪ ಗೌಡರವರನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಳೆಂಜ ಗ್ರಾಮದ ಕಾಯರ್ತಡ್ಕ ಕಾಂಗ್ರೆಸ್ ಮುಖಂಡ ಕಳೆಂಜ ನಿವಾಸಿ ಕುಶಾಲಪ್ಪ ಗೌಡ ಕಜೆ(48) ಎಂಬಾತನು ರಾಜೇಶ್ ಎಂ.ಕೆ ಮೇಲೆ ಕ್ಷುಲ್ಲಕ ಕಾರಣಕ್ಕೆ ಜಾತಿ ನಿಂದನೆ ಮಾಡಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ, ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.5 ರಂದು ಆರೋಪಿ ಕುಶಾಲಪ್ಪ ಗೌಡ ನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ಮಂಗಳೂರು ಸೆಷನ್ಸ್ ಕೋರ್ಟ್ ನ್ಯಾಯಧೀಶರ ಮನೆಗೆ ರಾತ್ರಿ ಹಾಜರುಪಡಿಸಿದ್ದು, ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಹಲ್ಲೆಗೊಳಾಗಾಗಿ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ರಾಜೇಶ್.ಎಂ.ಕೆ ನೀಡಿದ ದೂರಿನ ಮೇರೆಗೆ ಅಟ್ರಾಸಿಟಿ, ಕೊಲೆ ಯತ್ನ, ದರೋಡೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : ಶ್ರೇಷ್ಠ ಮಹಾಧರ್ಮಾಧ್ಯಕ್ಷರುಗಳು ಭಾಗಿ -ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರುಗಳು, ಡಾ.ಹೆಗ್ಗಡೆ ಆಗಮನ

Suddi Udaya

ಅರಸಿನಮಕ್ಕಿ: ಕಾಡು ಹಂದಿ ದಾಳಿ

Suddi Udaya

ಜಿಲ್ಲಾಮಟ್ಟದ ಐಟಿ ಕ್ವಿಜ್‌ ಸ್ಪರ್ಧೆ: ಉಜಿರೆಯ ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಫೋನೆಟಿಕ್ಸ್ ಇನ್ ಆಕ್ಷನ್: ಎಂಗೇಜಿಂಗ್ ಯಂಗ್ ಮೈಂಡ್ಸ್’ ಕಾರ್ಯಾಗಾರ

Suddi Udaya

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸಂಘ ಪಿಲಿಕಜೆ ಬೈಲುವಾರು ಸಮಿತಿಯ ಮಾಸಿಕ ಸಭೆ , ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ : ಹಳೆಕೋಟೆಯಲ್ಲಿ ಗೋಲ್ಡನ್ ಬ್ಯೂಟಿ ಪಾರ್ಲರ್ & ಮೇಕಪ್ ಅಕಾಡೆಮಿ (ಫ್ಯಾನ್ಸಿ ಮತ್ತು ಟೈಲರಿಂಗ್) ಶುಭಾರಂಭ

Suddi Udaya
error: Content is protected !!