30.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವಿದ್ಯಾರ್ಥಿ ಕವಿಗೋಷ್ಠಿ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವಿದ್ಯಾರ್ಥಿ ಕವಿಗೋಷ್ಠಿ ಜರಗಿತು.

ಹಿರಿಯ ಶಿಕ್ಷಕಿ ಶ್ರೀಮತಿ ರಾಜಶ್ರೀಯವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಿದ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಡಿ. ಇಡಿ. ಕಾಲೇಜಿನ ಪ್ರಾಂಶುಪಾಲರಾದ ಡಾ. ಸ್ವಾಮಿ ಕೆ. ಎ. ಯವರು ಮಾತನಾಡುತ್ತಾ, ಪರಿಸರ ಸಂರಕ್ಷಣೆಯ ಪ್ರಜ್ಞೆ ನಮ್ಮಲ್ಲಿ ಮೂಡಬೇಕು. ಇಂದಿನ ಜಾಗತಿಕೀಕರಣದ ವಿದ್ಯಮಾನಗಳಿಂದ ಪರಿಸರವು ನಾಶವಾಗುತ್ತಿದೆ. ನಮ್ಮ ಅಳಿವು ಉಳಿವಿನಲ್ಲಿ ಪರಿಸರದ ಉಳಿವಿನಲ್ಲಿದೆಯೆಂದು ವಿದ್ಯಾರ್ಥಿಗಳು ಚಿಂತನೆ ಮಾಡಬೇಕಾದ ಸನ್ನಿವೇಶ ನಿರ್ಮಾಣವಾಗಿದೆ ಎಂದು ಅಭಿಪ್ರಾಯಪಟ್ಟರು. ವಿಶ್ವ ಪರಿಸರದ ವಿಶೇಷತೆ ಬಗ್ಗೆ ವಿದ್ಯಾರ್ಥಿಗಳ ಪರವಾಗಿ ಕು. ಲಿಖಿತಾ ಮಾತನಾಡಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪರಿಸರದ ವಿವಿಧ ವಿಷಯಗಳಲ್ಲಿ ಏರ್ಪಡಿಸಿದ್ದ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಅನಂತರ ವಿದ್ಯಾರ್ಥಿ ಕವಿಗೋಷ್ಠಿ ಜರಗಿತು. ವೇದಿಕೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ ಕನಿಕ್ಕಿಲ ಮತ್ತು ಕಾರ್ಯಕ್ರಮದ ಸಂಯೋಜಕರಾದ ಶಿಕ್ಷಕಿ ಶ್ರೀಮತಿ ಕೋಕಿಲಾರವರು ಉಪಸ್ಥಿತರಿದ್ದು. ವಿದ್ಯಾರ್ಥಿಗಳಾದ ವಂಶಿತ್ ಸ್ವಾಗತಿಸಿ ಸಮೀಕ್ಷಾ ವಂದಿಸಿದರು, ಇಂದುಮತಿ ನಿರೂಪಿಸಿದರು.

Related posts

ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya

ಡಿ.5 : ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ದೇವರ ದಶ೯ನ ಬಲಿ ಉತ್ಸವ

Suddi Udaya

ಡಿ.6-8 ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ, ಶ್ರೀ ದುರ್ಗಾಗಣೇಶ ಸಭಾಭವನ ಲೋಕಾರ್ಪಣೆ

Suddi Udaya
error: Content is protected !!