28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವಿದ್ಯಾರ್ಥಿ ಕವಿಗೋಷ್ಠಿ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವಿದ್ಯಾರ್ಥಿ ಕವಿಗೋಷ್ಠಿ ಜರಗಿತು.

ಹಿರಿಯ ಶಿಕ್ಷಕಿ ಶ್ರೀಮತಿ ರಾಜಶ್ರೀಯವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಿದ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಡಿ. ಇಡಿ. ಕಾಲೇಜಿನ ಪ್ರಾಂಶುಪಾಲರಾದ ಡಾ. ಸ್ವಾಮಿ ಕೆ. ಎ. ಯವರು ಮಾತನಾಡುತ್ತಾ, ಪರಿಸರ ಸಂರಕ್ಷಣೆಯ ಪ್ರಜ್ಞೆ ನಮ್ಮಲ್ಲಿ ಮೂಡಬೇಕು. ಇಂದಿನ ಜಾಗತಿಕೀಕರಣದ ವಿದ್ಯಮಾನಗಳಿಂದ ಪರಿಸರವು ನಾಶವಾಗುತ್ತಿದೆ. ನಮ್ಮ ಅಳಿವು ಉಳಿವಿನಲ್ಲಿ ಪರಿಸರದ ಉಳಿವಿನಲ್ಲಿದೆಯೆಂದು ವಿದ್ಯಾರ್ಥಿಗಳು ಚಿಂತನೆ ಮಾಡಬೇಕಾದ ಸನ್ನಿವೇಶ ನಿರ್ಮಾಣವಾಗಿದೆ ಎಂದು ಅಭಿಪ್ರಾಯಪಟ್ಟರು. ವಿಶ್ವ ಪರಿಸರದ ವಿಶೇಷತೆ ಬಗ್ಗೆ ವಿದ್ಯಾರ್ಥಿಗಳ ಪರವಾಗಿ ಕು. ಲಿಖಿತಾ ಮಾತನಾಡಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪರಿಸರದ ವಿವಿಧ ವಿಷಯಗಳಲ್ಲಿ ಏರ್ಪಡಿಸಿದ್ದ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಅನಂತರ ವಿದ್ಯಾರ್ಥಿ ಕವಿಗೋಷ್ಠಿ ಜರಗಿತು. ವೇದಿಕೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ ಕನಿಕ್ಕಿಲ ಮತ್ತು ಕಾರ್ಯಕ್ರಮದ ಸಂಯೋಜಕರಾದ ಶಿಕ್ಷಕಿ ಶ್ರೀಮತಿ ಕೋಕಿಲಾರವರು ಉಪಸ್ಥಿತರಿದ್ದು. ವಿದ್ಯಾರ್ಥಿಗಳಾದ ವಂಶಿತ್ ಸ್ವಾಗತಿಸಿ ಸಮೀಕ್ಷಾ ವಂದಿಸಿದರು, ಇಂದುಮತಿ ನಿರೂಪಿಸಿದರು.

Related posts

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜೂನಿಯರ್ ರೆಡ್ ಕ್ರಾಸ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಣೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 15ನೇ ವಾರ್ಷಿಕ ಸಾಮಾನ್ಯ ಸಭೆ: ರೂ. 308.58 ಲಕ್ಷ ನಿವ್ವಳ ಲಾಭ : ಆತ್ಮಶಕ್ತಿಯ ನಿರಂತರ ಸಾಧನೆಗೆ ಸದಸ್ಯರ ಶ್ಲಾಘನೆ

Suddi Udaya

ಬೆಳ್ತಂಗಡಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಬಿ. ವಿಜಯ ಕುಮಾರ್ ಗೆ ಕರ್ನಾಟಕದ ಡಿಜಿ ಮತ್ತು ಐಜಿಪಿ ರವರ ಪ್ರಶಂಸ ಪದಕ ಪ್ರದಾನ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

Suddi Udaya

ಕೊಕ್ಕಡ: ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರಿನ ಬಾಳೆಕಾಯಿ ಮತ್ತು ಅಡಿಕೆ ವ್ಯಾಪಾರಿಯವರ ಅಂಗಡಿಯಿಂದ ರೂ. 1.80ಲಕ್ಷ ಹಣ ಕಳ್ಳತನ

Suddi Udaya

ಬೆಳ್ತಂಗಡಿ: ಸ.ಪ.ಪೂ. ಕಾಲೇಜಿನ ಪ್ರಾಚಾರ್ಯ ಸುಕುಮಾರ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ

Suddi Udaya
error: Content is protected !!