28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವಿದ್ಯಾರ್ಥಿ ಕವಿಗೋಷ್ಠಿ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಮತ್ತು ವಿದ್ಯಾರ್ಥಿ ಕವಿಗೋಷ್ಠಿ ಜರಗಿತು.

ಹಿರಿಯ ಶಿಕ್ಷಕಿ ಶ್ರೀಮತಿ ರಾಜಶ್ರೀಯವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಿದ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಡಿ. ಇಡಿ. ಕಾಲೇಜಿನ ಪ್ರಾಂಶುಪಾಲರಾದ ಡಾ. ಸ್ವಾಮಿ ಕೆ. ಎ. ಯವರು ಮಾತನಾಡುತ್ತಾ, ಪರಿಸರ ಸಂರಕ್ಷಣೆಯ ಪ್ರಜ್ಞೆ ನಮ್ಮಲ್ಲಿ ಮೂಡಬೇಕು. ಇಂದಿನ ಜಾಗತಿಕೀಕರಣದ ವಿದ್ಯಮಾನಗಳಿಂದ ಪರಿಸರವು ನಾಶವಾಗುತ್ತಿದೆ. ನಮ್ಮ ಅಳಿವು ಉಳಿವಿನಲ್ಲಿ ಪರಿಸರದ ಉಳಿವಿನಲ್ಲಿದೆಯೆಂದು ವಿದ್ಯಾರ್ಥಿಗಳು ಚಿಂತನೆ ಮಾಡಬೇಕಾದ ಸನ್ನಿವೇಶ ನಿರ್ಮಾಣವಾಗಿದೆ ಎಂದು ಅಭಿಪ್ರಾಯಪಟ್ಟರು. ವಿಶ್ವ ಪರಿಸರದ ವಿಶೇಷತೆ ಬಗ್ಗೆ ವಿದ್ಯಾರ್ಥಿಗಳ ಪರವಾಗಿ ಕು. ಲಿಖಿತಾ ಮಾತನಾಡಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪರಿಸರದ ವಿವಿಧ ವಿಷಯಗಳಲ್ಲಿ ಏರ್ಪಡಿಸಿದ್ದ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಅನಂತರ ವಿದ್ಯಾರ್ಥಿ ಕವಿಗೋಷ್ಠಿ ಜರಗಿತು. ವೇದಿಕೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ ಕನಿಕ್ಕಿಲ ಮತ್ತು ಕಾರ್ಯಕ್ರಮದ ಸಂಯೋಜಕರಾದ ಶಿಕ್ಷಕಿ ಶ್ರೀಮತಿ ಕೋಕಿಲಾರವರು ಉಪಸ್ಥಿತರಿದ್ದು. ವಿದ್ಯಾರ್ಥಿಗಳಾದ ವಂಶಿತ್ ಸ್ವಾಗತಿಸಿ ಸಮೀಕ್ಷಾ ವಂದಿಸಿದರು, ಇಂದುಮತಿ ನಿರೂಪಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya

ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ ಪ್ರಕ್ರಿಯೆ ಜೂ.9 ಬೆಳಿಗ್ಗೆಯಿಂದ ಅಂಗಾಂಗ ದಾನ ನೋಂದಣಿ, ರಕ್ತದಾನ ಶಿಬಿರ, ವೈದ್ಯಕೀಯ ತಪಾಸಣಾ ಶಿಬಿರ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ಅಧ್ಯಕ್ಷ ದೇವದಾಸ್ ಕೆ ಸಾಲಿಯಾನ್ ಹೇಳಿಕೆ

Suddi Udaya

ಎ.30: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢ ಕಲಶಾಭಿಷೇಕ

Suddi Udaya
error: Content is protected !!