28.2 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸೈಯ್ಯದ್ ಹಬೀಬ್ ವಹಿಸಿಕೊಂಡಿದ್ದರು. ಶಾಲಾ ಮುಖ್ಯಪಾದ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಅಧ್ಯಕ್ಷೀಯ ಮಾತುಗಳನ್ನಾಡಿದ ಜನಾಬ್ ಸೈಯದ್ ಹಬೀಬ್ ” ನಾವು ನಮ್ಮ ಭವಿಷ್ಯದ ಉಳಿವಿಗಾಗಿ ಪರಿಸರವನ್ನು ರಕ್ಷಿಸಬೇಕು. ಗಿಡ ನೆಟ್ಟು ಅದನ್ನು ಪೋಷಿಸುವ ಜವಾಬ್ದಾರಿಯನ್ನು ನಿರ್ವಹಿಸಬೇಕು” ಎಂದರು.

ಶಾಲಾ ವಿದ್ಯಾರ್ಥಿಗಳು ಛದ್ಮ ವೇಷದ ಮೂಲಕ ಪರಿಸರ ಜಾಗೃತಿಯನ್ನು ಮೂಡಿಸಿದರು. ಅತಿಥಿಗಳು ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಜೊತೆ ಸೇರಿ ಗಿಡ ನೆಟ್ಟು ಅದಕ್ಕೆ ನೀರುಣಿಸುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳು ಸುಮಾರು 50ಕ್ಕೂ ಹೆಚ್ಚು ಗಿಡಗಳನ್ನು ತಾವೇ ತಂದು ಅದನ್ನು ನೆಟ್ಟು ಪೋಷಿಸುವ ಪ್ರತಿಜ್ಞೆಯನ್ನು ಕೈಗೊಂಡರು. ಶಾಲಾ ಸಹ ಶಿಕ್ಷಕಿ ಶ್ರೀಮತಿ ಸುಶ್ಮಿತಾ ಕಾರ್ಯಕ್ರಮವನ್ನು ನಿರೂಪಿಸಿದರು. ಸಹಶಿಕ್ಷಕಿ ಶ್ರೀಮತಿ ಆಯಿಷಾ ವಂದಿಸಿದರು.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್: ಅತ್ಯುತ್ತಮ ವಲಯ ಪ್ರಶಸ್ತಿಯಲ್ಲಿ ಬೆಳ್ತಂಗಡಿ ವಲಯ ತೃತೀಯ ಸ್ಥಾನ

Suddi Udaya

ಉಜಿರೆ: ಅಗತ್ಯ ದಾಖಲೆ ಹಾಗೂ ನಗದು ಇದ್ದ ಪರ್ಸ್ ಬಿದ್ದು ಕಳೆದುಹೋಗಿದೆ

Suddi Udaya

ಕೊಲೆಗಾರರಿಗೆ ಕಠಿಣ ಶಿಕ್ಷೆ ಆಗಲಿ, ಜಿಲ್ಲೆಯ ಶಾಂತಿ ಸೌಹಾರ್ದತೆ ಮತ್ತೆ ಮರುಕಳಿಸಲಿ: ರಕ್ಷಿತ್ ಶಿವರಾಂ

Suddi Udaya

ಎಸ್ ಡಿ ಎಂ ಪ.ಪೂ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿ ಸಂಸ್ಕೃತದಲ್ಲಿ ಪೂರ್ಣಾಂಕ

Suddi Udaya

ವಾಲಿಬಾಲ್ ಪಂದ್ಯಾಟ: ಕೊಯ್ಯೂರು ಸರಕಾರಿ ಪ್ರೌಢ ಶಾಲೆಯ ಹುಡುಗರ ತಂಡ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟನೆ

Suddi Udaya
error: Content is protected !!