25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ: ಸೂಕ್ತ ಕ್ರಮಕೈಗೊಳ್ಳುವಂತೆ ತಾಲೂಕು ಮರಾಠಿ ಸೇವಾ ಸಂಘದ ಉಪಾಧ್ಯಕ್ಷ ವಸಂತ ನಡ ಆಗ್ರಹ

ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಜೂನ್ 2 ರಂದು ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಖಂಡನೀಯ. ನಮ್ಮ ಸಮುದಾಯದ ಮೇಲೆ ಈ ರೀತಿಯ ಘಟನೆಗಳು ಮುಂದುವರಿದರೆ ಬೀದಿಗಿಳಿಯುವುದು ಅನಿವಾರ್ಯ ಎಂದು ತಾಲೂಕು ಮರಾಠಿ ಸೇವಾ ಸಂಘದ ಉಪಾಧ್ಯಕ್ಷ ವಸಂತ ನಡ ಹೇಳಿದರು.

ಅವರು ಜೂ.6ರಂದು ಶ್ರೀ ನಾರಾಯಣ ಗುರು ಸಂಕೀರ್ಣದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು.

ಮಾಚಾರು ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ನಿರತರಾಗಿದ್ದ ಕರುಣಾಕರ ಗೌಡ ಎಂಬಾತ ಹೆಣ್ಣು ಮಕ್ಕಳಿಗೆ ನೀಡುತ್ತಿದ್ದ ಕಿರುಕುಳವನ್ನು ನಮ್ಮ ಸಮುದಾಯದ ಅಶ್ವಥ್ ಪ್ರಶ್ನಿಸಿದ ಕಾರಣಕ್ಕಾಗಿ ಈ ಹಲ್ಲೆ ನಡೆಸಲಾಗಿದೆ. ಈತ ಈ ಹಿಂದೆ ಅಕ್ರಮ ಕಪ್ಪುಕಲ್ಲು ಗಣಿಗಾರಿಕೆ ಕೂಡ ನಡೆಸುತ್ತಿದ್ದ. ಸಣ್ಣಪುಟ್ಟ ಹಲ್ಲೆ, ದಾಂದಲೆ, ಗೂಂಡಾಗಿರಿ ನಡೆಸುತ್ತಿದ್ದ ಈತನ ಮೇಲೆ ಹಲವು ಕೇಸ್ ಗಳು ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದಾಖಲಾಗಿದೆ.

ಮೊನ್ನೆಯ ಘಟನೆಯಲ್ಲಿ ಮಾರಣಾಂತಿಕ ಹಲ್ಲೆ ನಡೆದು ಅಶ್ವಥ್ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವಿಚಾರ ತಿಳಿದುಕೊಂಡ ಕರುಣಾಕರ ಗೌಡ ತನ್ನ ತಾಯಿಯನ್ನು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಮಾನಭಂಗಕ್ಕೆ ಯತ್ನ ನಡೆದಿದೆ ಎಂದು ನಮ್ಮ ಸಮುದಾಯದ ಅಶ್ವಥ್ ಮತ್ತು ಮೇಲೆ ಸುಳ್ಳು ಕೇಸ್ ದಾಖಲಿಸಿರುವುದು ಅತ್ಯಂತ ಕಟು ಶಬ್ದಗಳಿಂದ ಖಂಡಿಸುತ್ತೇವೆ.

ಆರೋಪಿ ಕರುಣಾಕರ ಗೌಡನ ಈ ಹಿಂದಿನ ಎಲ್ಲಾ ಕೇಸ್ ಗಳ ಆಧಾರದಲ್ಲಿ ಆತನನ್ನು ರೌಡಿಶೀಟರ್ ಪಟ್ಟಿಗೆ ಸೇರಿಸುವ ಮೂಲಕ ಆತನನ್ನು ಬೆಳ್ತಂಗಡಿ ತಾಲೂಕಿನಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸುತ್ತೇವೆ ಎಂದರು.

ಪ್ರತಿಕಾಗೋಷ್ಠಿಯಲ್ಲಿ ತಾಲೂಕು ಮರಾಠಿ ಸೇವಾ ಸಂಘದ ಸಂಚಾಲಕ ಪ್ರಶಾಂತ್, ಆದಿವಾಸಿ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಶೇಖರ್ ಲಾಯಿಲ, ವಿಶ್ವನಾಥ ಮಾಚಾರು ಉಪಸ್ಥಿತರಿದ್ದರು.

Related posts

ಎಕ್ಸೆಲ್ ಟೆಕ್ನೊ ಸ್ಕೂಲ್ ನ ಪೂರ್ವ ಪ್ರಾಥಮಿಕ ವಿಭಾಗದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿ ಛದ್ಮವೇಷ ಸ್ಪರ್ಧೆ

Suddi Udaya

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದ ವತಿಯಿಂದ 4ನೇ ವರ್ಷದ ದೀಪಾವಳಿ ‘ದೋಸೆ ಹಬ್ಬ’ ಉದ್ಘಾಟನೆ

Suddi Udaya

ಕಡಿರುದ್ಯಾವರ :ಹೇಡ್ಯ ಎಂಬಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಟ್ರಯಥ್ಲಾನ್ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್‌ ಶಿಪ್‌: ಪಡಂಗಡಿಯ ಕುವರಿ ಅದ್ವಿಕಾ ಕೆಪಿ ಯವರಿಗೆ ಕಂಚಿನ ಪ್ರಶಸ್ತಿ

Suddi Udaya

ಉಜಿರೆ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya
error: Content is protected !!