May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುನ್ನತ್ ಕೆರೆ ಅಲ್ ಮಸ್ಜಿದುಲ್ ಹುದಾ ಜುಮಾ‌ ಮಸ್ಜಿದ್ ನ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ; ಅಲ್ ಮಸ್ಜಿದುಲ್ ಹುದಾ ಜುಮಾ‌ ಮಸ್ಜಿದ್ ಸುನ್ನತ್ ಕೆರೆ ಇದರ ವಾರ್ಷಿಕ ಮಹಾಸಭೆಯು ಬುಸ್ತಾನುಲ್ ಉಲೂಂ ಸೆಕೆಂಡರಿ ಮದರಸ ಸುನ್ನತ್ ಕೆರೆ ಸಭಾಂಗಣದಲ್ಲಿ ಜರುಗಿದ್ದು ನೂತನ ಆಡಳಿತ ಸಾಲಿನ ಅಧ್ಯಕ್ಷರಾಗಿ ಅಬ್ದುಲ್ ಹಕೀಂ ಸುನ್ನತ್‌ಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಖಲಂದರ್ ಬಿ.ಹೆಚ್, ಕೋಶಾಧಿಕಾರಿಯಾಗಿ ಅಬ್ಬಾಸ್ ಹಾಜಿ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಮಿತಿ ಗೌರವಾಧ್ಯಕ್ಷರಾಗಿ ಅಬ್ದುರ್ರಹ್ಮಾನ್ ಹಾಜಿ, ಉಪಾಧ್ಯಕ್ಷರರುಗಳಾಗಿ ಸ್ವಾದಿಕ್ ಸಾಹೇಬ್ ಮತ್ತು ಇಲ್ಯಾಸ್ ಎಸ್.ಕೆ, ಜೊತೆ ಕಾರ್ಯದರ್ಶಿಯಾಗಿ ಇಕ್ಬಾಲ್ ಫಿಶ್ ಹಾಗೂ ಲೆಕ್ಕಪರಿಶೋಧಕರಾಗಿ ಜಿ.ಎಂ ತಾಜುದ್ದೀನ್ ಇವರು ಆಯ್ಕೆಯಾದರು.

ಜಮಾಅತ್ ಖತೀಬ್ ಎಂ.ಕೆ ಅಬುಬಕ್ಕರ್ ಸಿದ್ದೀಕ್ ಹಿಮಮಿ ಅಲ್ ಫುರ್ಖಾನಿ ರಶಾದಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಯಂಗ್-ಮೆನ್ಸ್ ಪ್ರ.ಕಾರ್ಯದರ್ಶಿ ಜಿ.ಎಂ ತಾಜುದ್ದೀನ್ ಸ್ವಾಗತಿಸಿದರು. ಜಮಾಅತ್ ಪ್ರ.ಕಾರ್ಯದರ್ಶಿ ಶಮೀರ್ ಪ್ಲಾಸ್ಟಿಕ್ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರ ಮಂಡಿಸಿದರು.

ಮಹಾಸಭೆಯ ಬಳಿಕ ನೂತನ ದಾಖಲೆ ಪತ್ರಗಳನ್ನು ಹಸ್ತಾಂತರ ಮಾಡುವ ಮೂಲಕ ಅಧಿಕಾರ ಪದಗ್ರಹಣವೂ ನಡೆಯಿತು.

Related posts

ಜ.31-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಬೆಂಗಳೂರಿನ ಪ್ರಸಿದ್ದ ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಪಣಕಜೆ ‌ಭಜನಾ ಮಂದಿರದ ಬಳಿ ನಡೆದ ಅಪಘಾತದಲ್ಲಿ ರಸ್ತೆ ಚರಂಡಿಗೆ ಬಿದ್ದ ಸ್ಕೂಟರ್

Suddi Udaya

ಶಿರಾಡಿ ಘಾಟ್ ಚೆಕ್ ಪೋಸ್ಟ್ ಬಳಿ ಸರಣಿ ಅಪಘಾತ

Suddi Udaya

ಬೆಳ್ತಂಗಡಿ ಅಂಬೇಡ್ಕರ್ ಭವನದ ಬಳಿ ಅಸ್ವಸ್ಥಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕರುಣಾಕರ ಬಂಗೇರ ಹಾಗೂ ಸಾಯಿರಾಂ ಅಂಬುಲೆನ್ಸ್ ಮಾಲಕ ಪವನ್ ಬಂಗೇರ

Suddi Udaya

ಬೆಳ್ತಂಗಡಿ ಶ್ರೀ ಧ. ಮಂ.ಆಂ.ಮಾ. ಶಾಲೆಯಲ್ಲಿ ಆಟಿದ ಕೂಟ

Suddi Udaya
error: Content is protected !!