September 6, 2026
ಗ್ರಾಮಾಂತರ ಸುದ್ದಿ

“ಸುರ್ಯ ದೇವಸ್ಥಾನದ ವಠಾರದಲ್ಲಿ “ವಿಶ್ವ ಪರಿಸರ ದಿನಾಚರಣೆ “

ಬೆಳ್ತಂಗಡಿ:ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಸದಾಶಿವರುದ್ರ ದೇವಸ್ಥಾನದ ವಠಾರದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ಬೆಳ್ತಂಗಡಿ ವಲಯ ಹಾಗೂ ಸುರ್ಯ ದೇವಸ್ಥಾನದ ಆಶ್ರಯದಲ್ಲಿ “ವಿಶ್ವ ಪರಿಸರ ದಿನ ” ಆಚರಿಸಲಾಯಿತು. ಸುರ್ಯ ದೇವಸ್ಥಾನದ ಆನುವಂಶಿಯ ಆಡಳಿತ ಮೊಕ್ತೇಸರ ಡಾ. ಸತೀಶ್ಚಂದ್ರ ಸುರ್ಯಗುತ್ತು ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಡಾ. ಸತೀಶ್ಚಂದ್ರ ಹಾಗೂ ವಿದ್ಯಾ. ಪಿ. ಡಿ. ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ (ಸಾಮಾಜಿಕ ಅರಣ್ಯ ಇಲಾಖೆ ) ಇವರು ಪರಿಸರ ಸಂರಕ್ಷಣೆ ಹಾಗೂ ಸಾಮಾಜಿಕ ಅರಣ್ಯಕರಣದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಅರಣ್ಯಧಿಕಾರಿ ಅಶೋಕ್, ಇಲಾಖೆ ಸಿಬ್ಬಂದಿ ಶೇಖರ ಗೌಡ, ನಡ ಪಂಚಾಯತ್ ಮಾಜಿ ಅಧ್ಯಕ್ಷ ಮುನಿರಾಜ ಅಜ್ರಿ, ಪ್ರಸಾದ್, ಸುಂದರ ನಾಯ್ಕ, ಪದ್ಮನಾಭ ಗೌಡ, ಯೋಗೀಶ್ ಪೂಜಾರಿ ಹಾಜರಿದ್ದರು. ಮಾವು, ಹೆಬ್ಬಲಸು, ಸಂಪಿಗೆ, ನೇರಳೆ, ಶ್ರೀಗಂಧ, ಸೊರಗೆ , ಹೊಳೆ ದಾಸವಾಳ ಇತ್ಯಾದಿ ವಿವಿಧ ಬಗೆಯ ನೂರು ಗಿಡಗಳನ್ನು ಸುರ್ಯ ದೇವಸ್ಥಾನದ ವಠಾರದಲ್ಲಿ ನೆಡಲಾಯಿತು.

Related posts

ಬೆಳ್ತಂಗಡಿ ರಾಷ್ಟ್ರೀಯ ಲೋಕ ಅದಾಲತ್

Suddi Udaya

ಜೂ.21: ಬಳಂಜ ಬಿಲ್ಲವ ಸಂಘದಲ್ಲಿ ದತ್ತಿನಿಧಿಯಿಂದ ಪುಸ್ತಕ ವಿತರಣೆ, ವಿದ್ಯಾರ್ಥಿ ವೇತನ, ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ, ತರಬೇತಿ ಕಾರ್ಯಾಗಾರ

Suddi Udaya

ಲಾಯಿಲ: ವಿವಿಧ ಆಟೋಟ ಸ್ಪರ್ಧೆಗಳೊಂದಿಗೆ ಪಡ್ಲಾಡಿ ಮೊಸರು ಕುಡಿಕೆ ಉತ್ಸವ ಕಣ್ಸೆಳೆದ ಪುಟಾಣಿಗಳ ಕೃಷ್ಣ ವೇಷ:

Suddi Udaya

ಧಾರಾಕಾರವಾಗಿ ಸುರಿದ ಗಾಳಿ ಮಳೆ: ಮೇಲಂತಬೆಟ್ಟು ಕೆಲವು ಮನೆಗಳ ಮೇಲ್ಛಾವಣಿ ಕುಸಿತ

Suddi Udaya

ಭಗವದ್ಗೀತೆಯ ಕಂಠಪಾಠ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯನ್ನು ಪಡೆದ ಕುಮಾರಿ ಅದ್ವಿತಿ ರಾವ್ ರವರಿಗೆ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಸನ್ಮಾನ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!