July 23, 2026
ಗ್ರಾಮಾಂತರ ಸುದ್ದಿ

“ಸುರ್ಯ ದೇವಸ್ಥಾನದ ವಠಾರದಲ್ಲಿ “ವಿಶ್ವ ಪರಿಸರ ದಿನಾಚರಣೆ “

ಬೆಳ್ತಂಗಡಿ:ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಸದಾಶಿವರುದ್ರ ದೇವಸ್ಥಾನದ ವಠಾರದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ಬೆಳ್ತಂಗಡಿ ವಲಯ ಹಾಗೂ ಸುರ್ಯ ದೇವಸ್ಥಾನದ ಆಶ್ರಯದಲ್ಲಿ “ವಿಶ್ವ ಪರಿಸರ ದಿನ ” ಆಚರಿಸಲಾಯಿತು. ಸುರ್ಯ ದೇವಸ್ಥಾನದ ಆನುವಂಶಿಯ ಆಡಳಿತ ಮೊಕ್ತೇಸರ ಡಾ. ಸತೀಶ್ಚಂದ್ರ ಸುರ್ಯಗುತ್ತು ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಡಾ. ಸತೀಶ್ಚಂದ್ರ ಹಾಗೂ ವಿದ್ಯಾ. ಪಿ. ಡಿ. ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ (ಸಾಮಾಜಿಕ ಅರಣ್ಯ ಇಲಾಖೆ ) ಇವರು ಪರಿಸರ ಸಂರಕ್ಷಣೆ ಹಾಗೂ ಸಾಮಾಜಿಕ ಅರಣ್ಯಕರಣದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಅರಣ್ಯಧಿಕಾರಿ ಅಶೋಕ್, ಇಲಾಖೆ ಸಿಬ್ಬಂದಿ ಶೇಖರ ಗೌಡ, ನಡ ಪಂಚಾಯತ್ ಮಾಜಿ ಅಧ್ಯಕ್ಷ ಮುನಿರಾಜ ಅಜ್ರಿ, ಪ್ರಸಾದ್, ಸುಂದರ ನಾಯ್ಕ, ಪದ್ಮನಾಭ ಗೌಡ, ಯೋಗೀಶ್ ಪೂಜಾರಿ ಹಾಜರಿದ್ದರು. ಮಾವು, ಹೆಬ್ಬಲಸು, ಸಂಪಿಗೆ, ನೇರಳೆ, ಶ್ರೀಗಂಧ, ಸೊರಗೆ , ಹೊಳೆ ದಾಸವಾಳ ಇತ್ಯಾದಿ ವಿವಿಧ ಬಗೆಯ ನೂರು ಗಿಡಗಳನ್ನು ಸುರ್ಯ ದೇವಸ್ಥಾನದ ವಠಾರದಲ್ಲಿ ನೆಡಲಾಯಿತು.

Related posts

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya

ಆಗಸ್ಟ್ 2 , 3: ಉಜಿರೆಯಲ್ಲಿ “ಮಹಿಳಾ ಯಕ್ಷ ಸಂಭ್ರಮ” : ಪತ್ರಿಕಾಗೋಷ್ಠಿ

Suddi Udaya

ಕುವೆಟ್ಟು ಗ್ರಾ.ಪಂ. ನಿಂದ ಸಹಾಯಧನ ಹಸ್ತಾಂತರ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮಾಸ್ತಿ ಸಂಸ್ಮರಣ ಕಾರ್ಯಕ್ರಮ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ದೂರುದಾರ ಎಸ್.ಐ.ಟಿ ತನಿಖೆ ಮುಗಿಸಿ ವಾಪಸ್

Suddi Udaya
error: Content is protected !!