27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಕ್ಷರ ಕಲಿಸುವ ವಿದ್ಯಾ ದೇಗುಲಕ್ಕೆ ಖದೀಮರ ಕನ್ನ, ಕಣಿಯೂರಿನ ಪಿಲಿಗೂಡು ಶಾಲೆ ಬೀಗ ಒಡೆದು‌ ಕಳ್ಳತನ:

ಪಿಲಿಗೂಡು: ಕಣಿಯೂರು ಗ್ರಾಮದ ಪಿಲಿಗೂಡಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳ್ಳತನ ನಡೆದಿದ್ದು, ಖದೀಮರು ಶಾಲೆಯ ಬೀಗ ಒಡೆದು ಮಿಕ್ಸಿ, ಗ್ಯಾಸ್ ಹಂಡೆ ದೋಚಿದ್ದಾರೆ.


ಜೂ5 ರಂದು ರಾತ್ರಿ ಘಟನೆ ನಡೆದಿದ್ದು, ಮೊದಲಿಗೆ ಅಕ್ಷರ ದಾಸೋಹ ಕೊಠಡಿಗೆ ನುಗ್ಗಿ ಅಲ್ಲಿಂದ ಗ್ಯಾಸ್ ಹಂಡೆ ಹಾಗೂ ಸುಮಾರು 8 ಸಾವಿರ ರೂ ಮೌಲ್ಯದ ಹೊಸ ಮಿಕ್ಸಿಯನ್ನು ಕದ್ದಿದ್ದಾರೆ. ಬಳಿಕ ಅಲ್ಲಿಯೇ ಇದ್ದ ಪಿಕ್ಕಾಸಿನಿಂದ ಮುಖ್ಯಶಿಕ್ಷಕರ ಕಚೇರಿಯನ್ನು ಒಡೆದು ಬಳಿಕ ಅಲ್ಲಿದ್ದ ಕಪಾಟನ್ನು ಜಾಲಾಡಿದ್ದಾರೆ. ಬಳಿಕ ತರಗತಿಗಳಲ್ಲಿಯೂ ಹುಡುಕಾಟ ನಡೆಸಿದ್ದಾರೆ. ಬೆಳಗ್ಗೆ ಶಾಲಾ ಮಕ್ಕಳು ಬೀಗ ತೆರೆಯಲು ಬಂದ ವೇಳೆ ಘಟನೆ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.


ಘಟನೆ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಉಪ್ಪಿನಂಗಡಿ‌ ಠಾಣೆಯ ಎಸ್ಐ ಅವಿನಾಶ್ ಅವರು ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.


ಪಿಲಿಗೂಡು ಪರಿಸರದಲ್ಲಿ ಸಣ್ಣಪುಟ್ಟ ಕಳ್ಳತನ ನಡೆದಿದ್ದು, ದೂರು ನೀಡುವ ಹಂತಕ್ಕೆ ತಲುಪಿರಲಿಲ್ಲ. ಇದೀಗ ವಿದ್ಯಾ ದೇಗುಲವಾದ ಶಾಲೆಗೆ ಖದೀಮರು ಎಂಟ್ರಿ ಕೊಟ್ಟಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ‌. ಪಿಲಿಗೂಡು ಮೂಲಕ ಬಳ್ಳಮಂಜ, ಕಕ್ಯಪದವು ಅದೇರೀತಿ ಪದ್ಮುಂಜ, ಬಂದಾರು, ನೆಕ್ಕಿಲು, ಕುಪ್ಪೆಟ್ಟಿ ಮೊದಲಾದ ಕಡೆ ಸಂಪರ್ಕಿಸುವ ರಸ್ತೆ ಇದ್ದು ಅಕ್ರಮ ಕೆಲಸ ಎಸಗುವವರಿಗೆ ಉತ್ತಮ ತಾಣ ಎಂಬಂತಾಗಿದೆ ಪೊಲೀಸರು ಈ ಭಾಗದಲ್ಲಿಯೂ ಗಸ್ತು ಹೆಚ್ಚಿಸಬೇಕು ಎಂಬ ಮಾತುಗಳೂ ಕೇಳಿ ಬರುತ್ತಿವೆ. ಶಾಲೆಯ ಸಮೀಪದಲ್ಲೇ ಉದ್ಯಮಿಯೊಬ್ಬರ ಮನೆ ಇದ್ದು, ಮುಂದೆ ಇಂತಹ ಅಹಿತಕರ ಘಟನೆ ನಡೆಯದಿರಲಿ, ಕಳ್ಳರನ್ನು ಬೇಗನೇ ಪತ್ತೆ ಹಚ್ಚಿ ಶಿಕ್ಷಿಸಲಿ ಎನ್ನುವುದು ಸಾರ್ವಜನಿಕರ ಆಶಯವಾಗಿದೆ.

Related posts

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಒಕ್ಕೂಟ ಬಲವರ್ಧನೆ ಬಗ್ಗೆ ತರಬೇತಿ ಕಾರ್ಯಾಗಾರ

Suddi Udaya

ಅಳದಂಗಡಿ ಅರಮನೆಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ಕುತ್ಲೂರು: ದರ್ಖಾಸು ಮನೆಯ ಶ್ರೀಮತಿ ಅಪ್ಪಿ ನಿಧನ

Suddi Udaya

ಮಾಲಾಡಿ ಸೋಣಂದೂರಿನಲ್ಲಿ ಗಾಳಿ ಮಳೆಗೆ ಮನೆ, ಕೃಷಿಗೆ ತೀವ್ರ ತರಹದ ಹಾನಿ: ಕೋಟ್ಯಾಂತರ ರೂ. ನಷ್ಟಮಾಲಾಡಿ ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್‌ರವರ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಜಿಲ್ಲೆಯ ಹಾಸ್ಟೇಲ್‌ಗಳ ಸ್ಥಿತಿಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಸದಸ್ಯ ಪ್ರತಾಪಸಿಂಹ ನಾಯಕ್‌ ಪ್ರಶ್ನೆ

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!