24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಚಿತ ಬಿದಿರು ಸಸಿಗಳ ವಿತರಣೆ; ಅರ್ಜಿ ಆಹ್ವಾನ

ಬೆಳ್ತಂಗಡಿ: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಂಗಳೂರು ಇವರು ಸಿಎಸ್ಆರ್ ನಿಧಿಯಲ್ಲಿ ಬಿದಿರು ಬೆಳೆಸುವ ಯೋಜನೆ ಹಾಕಿಕೊಂಡಿದ್ದು, ಪ್ರಾರಂಭಿಕ ಹಂತದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 25 ಸಾವಿರ ಬಿದಿರು ಸಸಿಗಳನ್ನು ಉಚಿತವಾಗಿ ರೈತರಿಗೆ ವಿತರಿಸಲಿದ್ದಾರೆ.

ಈ ಯೋಜನೆಯು ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಂಗಳೂರು ಹಾಗೂ ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ (ನಿ.) ಉಜಿರೆ ಇವರು ಜಂಟಿಯಾಗಿ ಅನುಷ್ಠಾನ ಮಾಡುವ ಯೋಜನೆಯಾಗಿದ್ದು ಬಿದಿರು ಕೃಷಿಯಲ್ಲಿ ಆಸಕ್ತ ಕೃಷಿಕರು ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಮುಖ್ಯ ಕಚೇರಿ, ಉಜಿರೆಯಲ್ಲಿ ಈ ಬಗ್ಗೆ ಅವಶ್ಯಕ ಅರ್ಜಿಯನ್ನು ಜೂ.20 ರ ಮೊದಲು ಸಲ್ಲಿಸಬೇಕಾಗಿರುತ್ತದೆ.

ಈ ಯೋಜನೆಯಲ್ಲಿ ಕನಿಷ್ಟ 50 ಗಿಡ ಹಾಗೂ ಗರಿಷ್ಟ 600 ಗಿಡಗಳನ್ನು ಉಚಿತವಾಗಿ ನೀಡಲಾಗುವುದು. ಉಚಿತ ವಿತರಿಸಿದ ಬಿದಿರು ಗಿಡಗಳನ್ನು ಕಡ್ಡಾಯವಾಗಿ ನಾಟಿಮಾಡಬೇಕು ಹಾಗೂ ಬಿದಿರು ಸೊಸೈಟಿ ಆಫ್ ಇಂಡಿಯಾ ಇಲ್ಲಿನ ಪ್ರತಿನಿಧಿಗೆ ಗಿಡದ ಬೆಳವಣಿಗೆ ಬಗ್ಗೆ ಮಾಹಿತಿ ನೀಡುವುದು ಕಡ್ಡಾಯವಾಗಿರುತ್ತದೆ. ಮುಂದಿನ ಎರಡು ವರ್ಷ ಉತ್ತಮವಾಗಿ ಬೆಳೆಸಿದ ಸಸಿಗಳಿಗೆ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿ ನೀಡಲು ಇಚ್ಚಿಸುವ ರೈತರು ತಮ್ಮ ಸ್ವವಿವರದೊಂದಿಗೆ ಬಿದಿರು ಕೃಷಿ ಮಾಡಲಿಚ್ಚಿಸುವ ಜಾಗದ ವಿವರ ಮತ್ತು ಆಧಾರ್ ಪ್ರತಿಯೊಂದಿಗೆ ಕಚೇರಿ ಸಮಯದಲ್ಲಿ ಸಂಘವನ್ನು ಸಂಪರ್ಕಿಸಬೇಕಾಗಿ ತಿಳಿಸಿದೆ.

Related posts

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಡಂತ್ಯಾರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಮರೋಡಿ ಗ್ರಾ.ಪಂ. ಮಾಜಿ ಸದಸ್ಯ ಗಂಗಯ್ಯ ಪೂಜಾರಿ ನಿಧನ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆಯ ವಿದ್ಯಾರ್ಥಿಗಳಿಗೆ ಬೆಳ್ತಂಗಡಿಯಲ್ಲಿ ಅದ್ದೂರಿ ಸ್ವಾಗತ

Suddi Udaya

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

Suddi Udaya

ಬೆಳ್ತಂಗಡಿ: ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ನಟ ರಮೇಶ್ ಅರವಿಂದ್ ಭೇಟಿ: ಪುಷ್ಪಗುಚ್ಚ ನೀಡಿ ಸ್ವಾಗತಿಸಿದ ಸಿರಿ ಸಿಬ್ಬಂದಿಗಳು

Suddi Udaya

ತೆಕ್ಕಾರು ಗ್ರಾ.ಪಂನಲ್ಲಿ ವಿಶೇಷ ಗ್ರಾಮ ಸಭೆ

Suddi Udaya
error: Content is protected !!