23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಚಿತ ಬಿದಿರು ಸಸಿಗಳ ವಿತರಣೆ; ಅರ್ಜಿ ಆಹ್ವಾನ

ಬೆಳ್ತಂಗಡಿ: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಂಗಳೂರು ಇವರು ಸಿಎಸ್ಆರ್ ನಿಧಿಯಲ್ಲಿ ಬಿದಿರು ಬೆಳೆಸುವ ಯೋಜನೆ ಹಾಕಿಕೊಂಡಿದ್ದು, ಪ್ರಾರಂಭಿಕ ಹಂತದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 25 ಸಾವಿರ ಬಿದಿರು ಸಸಿಗಳನ್ನು ಉಚಿತವಾಗಿ ರೈತರಿಗೆ ವಿತರಿಸಲಿದ್ದಾರೆ.

ಈ ಯೋಜನೆಯು ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಂಗಳೂರು ಹಾಗೂ ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ (ನಿ.) ಉಜಿರೆ ಇವರು ಜಂಟಿಯಾಗಿ ಅನುಷ್ಠಾನ ಮಾಡುವ ಯೋಜನೆಯಾಗಿದ್ದು ಬಿದಿರು ಕೃಷಿಯಲ್ಲಿ ಆಸಕ್ತ ಕೃಷಿಕರು ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಮುಖ್ಯ ಕಚೇರಿ, ಉಜಿರೆಯಲ್ಲಿ ಈ ಬಗ್ಗೆ ಅವಶ್ಯಕ ಅರ್ಜಿಯನ್ನು ಜೂ.20 ರ ಮೊದಲು ಸಲ್ಲಿಸಬೇಕಾಗಿರುತ್ತದೆ.

ಈ ಯೋಜನೆಯಲ್ಲಿ ಕನಿಷ್ಟ 50 ಗಿಡ ಹಾಗೂ ಗರಿಷ್ಟ 600 ಗಿಡಗಳನ್ನು ಉಚಿತವಾಗಿ ನೀಡಲಾಗುವುದು. ಉಚಿತ ವಿತರಿಸಿದ ಬಿದಿರು ಗಿಡಗಳನ್ನು ಕಡ್ಡಾಯವಾಗಿ ನಾಟಿಮಾಡಬೇಕು ಹಾಗೂ ಬಿದಿರು ಸೊಸೈಟಿ ಆಫ್ ಇಂಡಿಯಾ ಇಲ್ಲಿನ ಪ್ರತಿನಿಧಿಗೆ ಗಿಡದ ಬೆಳವಣಿಗೆ ಬಗ್ಗೆ ಮಾಹಿತಿ ನೀಡುವುದು ಕಡ್ಡಾಯವಾಗಿರುತ್ತದೆ. ಮುಂದಿನ ಎರಡು ವರ್ಷ ಉತ್ತಮವಾಗಿ ಬೆಳೆಸಿದ ಸಸಿಗಳಿಗೆ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿ ನೀಡಲು ಇಚ್ಚಿಸುವ ರೈತರು ತಮ್ಮ ಸ್ವವಿವರದೊಂದಿಗೆ ಬಿದಿರು ಕೃಷಿ ಮಾಡಲಿಚ್ಚಿಸುವ ಜಾಗದ ವಿವರ ಮತ್ತು ಆಧಾರ್ ಪ್ರತಿಯೊಂದಿಗೆ ಕಚೇರಿ ಸಮಯದಲ್ಲಿ ಸಂಘವನ್ನು ಸಂಪರ್ಕಿಸಬೇಕಾಗಿ ತಿಳಿಸಿದೆ.

Related posts

ದಯಾ ವಿಶೇಷ ಶಾಲೆಯಲ್ಲಿ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬ ಆಚರಣೆ

Suddi Udaya

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆ

Suddi Udaya

ಬಳ್ಳಮಂಜ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮೇಷ ಜಾತ್ರೆಗೆ ಚಾಲನೆ

Suddi Udaya

ಬೆಳಾಲು ಹಾ.ಉ.ಸ. ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ನಿರ್ದೇಶಕರಿಗೆ ಗೆಲುವು

Suddi Udaya

ರೇಪ್ ಕೇಸ್ ವಿಚಾರವಾಗಿ ನಕಲಿ ಕರೆ: ಪಟ್ರಮೆಯ ದಂಪತಿಯಿಂದ ಕರೆ ಮಾಡಿದ ವಂಚಕನಿಗೆ ತರಾಟೆ

Suddi Udaya

ಉತ್ತರಖಾಂಡ್ ಕೇದಾರನಾಥ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ

Suddi Udaya
error: Content is protected !!