28.6 C
ಪುತ್ತೂರು, ಬೆಳ್ತಂಗಡಿ
September 19, 2026
ಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಕಳೆಂಜ ಕುಶಾಲಪ್ಪ ಗೌಡರ ಮನೆಯ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಗ್ಗೆ ಆರೋಪ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪತ್ರಿಕಾಗೋಷ್ಠಿ

ಬೆಳ್ತಂಗಡಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿನ ಸಂಭ್ರಮಾಚರಣೆ ಮಾಡುವ ನೆಪದಲ್ಲಿ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಲ್ಲಿ ಇದ್ದರೂ ಕಾನೂನನ್ನು ಮೀರಿ ಬೆಳ್ತಂಗಡಿ ತಾಲೂಕು ಕಳೆಂಜ ಗ್ರಾಮದ ಕಜೆ ಮನೆಯ ಕುಶಾಲಪ್ಪ ಗೌಡರ ಮನೆಯ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಕಳೆಂಜ ಗ್ರಾಮದ ಬಿಜೆಪಿ ಕಾರ್ಯಕರ್ತ ರಾಜೇಶ್ ಎಂಬಾತ ಸುಡುಮದ್ದನ್ನು ಸಿಡಿಸಿ ಮನೆಯಲ್ಲಿದ್ದ ಮಹಿಳೆಯರಿಗೆ ಅವ್ಯಾಚ ಶಬ್ದಗಳಿಂದ ನಿಂದಿಸಿ ದೌರ್ಜನ್ಯವನ್ನು ನಡೆಸಿರುತ್ತಾರೆ. ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ತನ್ನ ಕುಟುಂಬದ ರಕ್ಷಣೆಗಾಗಿ ಕುಶಾಲಪ್ಪ ಗೌಡರು ಪ್ರತಿರೋಧವನ್ನು ತೋರಿರುತ್ತಾರೆ. ಈ ಸಂದರ್ಭದಲ್ಲಿ ನಡೆದ ಘಟನೆಯಲ್ಲಿ ಗಾಯಗಳು ಆಗಿರುತ್ತದೆ. ಕಾನೂನು ಪ್ರಕಾರ ಪ್ರಸ್ತುತ ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿ ಇರುವಾಗ ಸಂಭ್ರಮಾಚರಣೆಯ ನೆಪದಲ್ಲಿ ಕುಶಾಲಪ್ಪ ಗೌಡರ ಆವರಣದ ಒಳಗೆ ಸುಡುಮದ್ದು ಸಿಡಿಸಿ ಸಂಭ್ರಮಾಚರಣೆ ಮಾಡಿರುವುದನ್ನು ಖಂಡಿಸುವುದಲ್ಲದೆ ಅಪ್ರಾಪ್ತ ಹೆಣ್ಣು ಮಗಳಿಗೆ ದೌರ್ಜನ್ಯ ಎಸಗಿರುವುದನ್ನು ಕೂಡ ನಾವು ಖಂಡಿಸುತ್ತೇವೆ. ಈ ಸಮಯದಲ್ಲಿ ಪರಸ್ಪರ ಹಲ್ಲೆ ನಡೆದಿರುವುದು ವಿಷಾದನೀಯ ಎಂದು ಎಸ್.ಸಿ. ಘಟಕದ ಜಿಲ್ಲಾ ಅಧ್ಯಕ್ಷ ಜಿ.ಪ.ಮಾಜಿ ಸದಸ್ಯ ಶೇಖರ ಕುಕ್ಕೇಡಿ ಮತ್ತು ಎಸ್.ಸಿ ಘಟಕದ ಗ್ರಾಮೀಣ ಅಧ್ಯಕ್ಷ ನೇಮಿರಾಜ ಕಿಲ್ಲೂರು ಹೇಳಿದರು.

ಅವರು ಜೂ.6ರಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಈ ಪ್ರಕರಣವನ್ನು ರಾಜಕೀಯ ದುರುದ್ದೇಶಕ್ಕಾಗಿ ಬಿಜೆಪಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಇವರನ್ನು ಎಳೆದು ತಂದಿರುವುದು ದುರದೃಷ್ಟಕರ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸ್ ಇಲಾಖೆಯು ತುರ್ತು ಕಾರ್ಯ ಪ್ರರ್ವತರಾಗಿ ತಪ್ಪಿತ್ತಸ್ಥರನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರಿಗಿಸಿರುವುದಕ್ಕೆ ನಾವು ಅಭಿನಂದಿಸುತ್ತೇವೆ.
ಆದರೆ ಬೆಳ್ತಂಗಡಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆದರೂ ಅವುಗಳನ್ನು ರಕ್ಷಿತ್ ಶಿವರಾಂರವರ ಹೆಸರನ್ನು ಎಳೆದು ತರುತ್ತಿರುವುದು ಬಿಜೆಪಿಗೆ ಇದೊಂದು ಚಾಳಿಯಾಗಿ ಬಂದಿರುತ್ತದೆ. ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷರು ಕಾನೂನಿನ ಪರಿಜ್ಞಾನವಿಲ್ಲದೆ ಮತ್ತು ವಾಸ್ತವಿಕ ತಿಳಿದುಕೊಳ್ಳದೆ ಸಾರ್ವಜನಿಕವಾಗಿ ಮಾತನಾಡಿರುವುದು ಖಂಡನೀಯ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಬೆಳ್ತಂಗಡಿ ಬ್ಲಾಕ್ ಗ್ರಾಮೀಣ ಅಧ್ಯಕ್ಷ ಸತೀಶ್‌ ಕೆ ಬಂಗೇರ ಕಾಶಿಪಟ್ಣ, ಬೆಳ್ತಂಗಡಿ ಬ್ಲಾಕ್ ನಗರ ಅಧ್ಯಕ್ಷ ಜಯಾನಂದ ಪಿಲಿಕಲ, ಗ್ರಾಮೀಣ ಎಸ್.ಸಿ ಘಟಕ ಬಿ.ಕೆ ವಸಂತ್, ಪಕ್ಷದ ಮುಖಂಡರರಾದ ಶ್ರೀಧರ್ ಕಳೆಂಜ, ಜೈಸನ್ ಪಟ್ಟೇರಿ ಉಪಸ್ಥಿತರಿದ್ದರು.

Related posts

ಉಜಿರೆ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ( ಸಿ.ಬಿ.ಎಸ್‌.ಇ ) ಯಲ್ಲಿ ಶಿಕ್ಷಕರಿಗೆ ಯೋಗ ತರಬೇತಿ

Suddi Udaya

ನ.4: ಭಜಕ ಸಹೋದರಿಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Suddi Udaya

ಪ್ರಧಾನಿ ನರೇಂದ್ರ ಮೋದಿ ಯವರ ಹುಟ್ಟು ಹಬ್ಬದ ಪ್ರಯುಕ್ತ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವರಿಗೆ ವಿಶೇಷ ಪೂಜೆ

Suddi Udaya

ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಹಾವಳಿ : ಕೃಷಿ ಹಾನಿ

Suddi Udaya

ಲಯನ್ಸ್ ಬೆಳ್ತಂಗಡಿ ವತಿಯಿಂದ “ಡ್ರಗ್ಸ್ ಮುಕ್ತ ಬೆಳ್ತಂಗಡಿ” ಅಭಿಯಾನದ ಕರಪತ್ರ ಅನಾವರಣ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya
error: Content is protected !!