25.3 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಬಿಜೆಪಿ ಮುಖಂಡನ ಮೇಲಿನ ಹಲ್ಲೆ ಕುರಿತು ಬಿಜೆಪಿ ಮಂಡಲ ವತಿಯಿಂದ ಪತ್ರಿಕಾಗೋಷ್ಠಿ

ಬೆಳ್ತಂಗಡಿ : ಬೆಳ್ತಂಗಡಿ ಅನೇಕ ನಾಯಕರುಗಳು ಶಾಸಕರಾಗಿ ಹೋದ ಕ್ಷೇತ್ರ ಆದರೆ ದ್ವೇಷ ರಾಜಕೀಯ ಇರಲಿಲ್ಲ. ವಸಂತ ಬಂಗೇರರು ಇರುವಾಗ ಈ ರೀತಿ ನಡೆದಿಲ್ಲ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಹೇಳಿದರು.

ಅವರು ಜೂ.6ರಂದು ಗುರುವಾಯನಕೆರೆ ನವಶಕ್ತಿ ಹೋಟೆಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಕಳೆಂಜದಲ್ಲಿ ಎಸ್ ಟಿ ಮುಖಂಡ ರಾಜೇಶ್ ನ ಮೇಲಿನ ಹಲ್ಲೆಯ ಹಿಂದೆ ಕೊಲೆಯ ಪ್ರಯತ್ನ ನಡೆದಿದೆ ಎಂಬುವುದು ಸ್ಪಷ್ಟ. ಜಾತಿ ನಿಂದನೆಯನ್ನು ಕುಶಾಲಪ್ಪ ಗೌಡ ರವರು ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸನ್ನು ಹಾಕುವುದರ ಮೂಲಕ ಸುಳ್ಳಿನ ಕಂತೆಗಳ ಸುರಿಮಳೆ ಇವತ್ತು ಆಗುತ್ತಿದೆ. ಪರಿಶಿಷ್ಟ ಪಂಗಡದ ವ್ಯಕ್ತಿಗೆ ಈ ರೀತಿ ಮಾಡ್ತಾರೆ ಎಂದಾದರೆ ಇನ್ನೂ ಸಾಮಾನ್ಯ ಜನರ ಕಥೆ ಏನು?, ಈ ರೀತಿಯ ಕೀಳು ಮಟ್ಟದ ರಾಜಕೀಯವನ್ನು ನಾನು ನೋಡಿಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ ಕೋಟ್ಯಾನ್, ರಾಜ್ಯ ಸಮಿತಿ ಸದಸ್ಯ ಕೊರಗಪ್ಪ ನಾಯ್ಕ, ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಆದಿನಾಥ ಬಜಾಜ್ ನಲ್ಲಿ ಆಯುಧ ಪೂಜೆ

Suddi Udaya

ಜ.4: ಮರೋಡಿ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya

ಸಾವ್ಯ: ನೂಜಿಲೋಡಿಯಲ್ಲಿ ಮನೆಗೆ ನುಗ್ಗಿದ್ದ ಕಳ್ಳರು: ರೂ.2.15ಲಕ್ಷ ಮೌಲ್ಯದ ಸೊತ್ತುಗಳ ಕಳವು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆ ದ್ವೀತಿಯ ಸ್ಥಾನ

Suddi Udaya

ಬಳಂಜ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಪ್ಲೇಟ್ ಇಡುವ ಸ್ಟ್ಯಾಂಡ್ ಕೊಡುಗೆ

Suddi Udaya
error: Content is protected !!