26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಬಿಜೆಪಿ ಮುಖಂಡನ ಮೇಲಿನ ಹಲ್ಲೆ ಕುರಿತು ಬಿಜೆಪಿ ಮಂಡಲ ವತಿಯಿಂದ ಪತ್ರಿಕಾಗೋಷ್ಠಿ

ಬೆಳ್ತಂಗಡಿ : ಬೆಳ್ತಂಗಡಿ ಅನೇಕ ನಾಯಕರುಗಳು ಶಾಸಕರಾಗಿ ಹೋದ ಕ್ಷೇತ್ರ ಆದರೆ ದ್ವೇಷ ರಾಜಕೀಯ ಇರಲಿಲ್ಲ. ವಸಂತ ಬಂಗೇರರು ಇರುವಾಗ ಈ ರೀತಿ ನಡೆದಿಲ್ಲ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಹೇಳಿದರು.

ಅವರು ಜೂ.6ರಂದು ಗುರುವಾಯನಕೆರೆ ನವಶಕ್ತಿ ಹೋಟೆಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಕಳೆಂಜದಲ್ಲಿ ಎಸ್ ಟಿ ಮುಖಂಡ ರಾಜೇಶ್ ನ ಮೇಲಿನ ಹಲ್ಲೆಯ ಹಿಂದೆ ಕೊಲೆಯ ಪ್ರಯತ್ನ ನಡೆದಿದೆ ಎಂಬುವುದು ಸ್ಪಷ್ಟ. ಜಾತಿ ನಿಂದನೆಯನ್ನು ಕುಶಾಲಪ್ಪ ಗೌಡ ರವರು ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸನ್ನು ಹಾಕುವುದರ ಮೂಲಕ ಸುಳ್ಳಿನ ಕಂತೆಗಳ ಸುರಿಮಳೆ ಇವತ್ತು ಆಗುತ್ತಿದೆ. ಪರಿಶಿಷ್ಟ ಪಂಗಡದ ವ್ಯಕ್ತಿಗೆ ಈ ರೀತಿ ಮಾಡ್ತಾರೆ ಎಂದಾದರೆ ಇನ್ನೂ ಸಾಮಾನ್ಯ ಜನರ ಕಥೆ ಏನು?, ಈ ರೀತಿಯ ಕೀಳು ಮಟ್ಟದ ರಾಜಕೀಯವನ್ನು ನಾನು ನೋಡಿಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ ಕೋಟ್ಯಾನ್, ರಾಜ್ಯ ಸಮಿತಿ ಸದಸ್ಯ ಕೊರಗಪ್ಪ ನಾಯ್ಕ, ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ ಉಪಸ್ಥಿತರಿದ್ದರು.

Related posts

ಎಕ್ಸೆಲ್ ಪ್ರೀಮಿಯೆರ್ ಲೀಗ್ ಸೀಸನ್-3: ಎಕ್ಸೆಲ್ ವಿದ್ಯಾಗಣಪತಿ ತಂಡ ಚಾಂಪಿಯನ್ಸ್

Suddi Udaya

ಬಳಂಜ : ಕಜೆಕೋಡಿ ನಿವಾಸಿ ಧರ್ಣಪ್ಪ ಶೆಟ್ಟಿ ನಿಧನ

Suddi Udaya

ಚಂದ್ರನ ಮೇಲೆ ಸ್ಪರ್ಶ, ಎಕ್ಸೆಲ್ ನಲ್ಲಿ ಹರ್ಷ

Suddi Udaya

ಭವಿಷ್ಯದ ಶಿಕ್ಷಣದತ್ತ ಮತ್ತೊಂದು ದಿಟ್ಟ ಹೆಜ್ಜೆ – ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ AI & ರೋಬೋಟಿಕ್ಸ್ ತರಗತಿಗಳ ಆರಂಭ

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಚಾರ್ಮಾಡಿ ಘಾಟಿ: ಮರ ಧಾರಾಶಾಹಿ-ಸಂಚಾರ ಸ್ಥಗಿತ

Suddi Udaya
error: Content is protected !!