May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಬಿಜೆಪಿ ಮುಖಂಡನ ಮೇಲಿನ ಹಲ್ಲೆ ಕುರಿತು ಬಿಜೆಪಿ ಮಂಡಲ ವತಿಯಿಂದ ಪತ್ರಿಕಾಗೋಷ್ಠಿ

ಬೆಳ್ತಂಗಡಿ : ಬೆಳ್ತಂಗಡಿ ಅನೇಕ ನಾಯಕರುಗಳು ಶಾಸಕರಾಗಿ ಹೋದ ಕ್ಷೇತ್ರ ಆದರೆ ದ್ವೇಷ ರಾಜಕೀಯ ಇರಲಿಲ್ಲ. ವಸಂತ ಬಂಗೇರರು ಇರುವಾಗ ಈ ರೀತಿ ನಡೆದಿಲ್ಲ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಹೇಳಿದರು.

ಅವರು ಜೂ.6ರಂದು ಗುರುವಾಯನಕೆರೆ ನವಶಕ್ತಿ ಹೋಟೆಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಕಳೆಂಜದಲ್ಲಿ ಎಸ್ ಟಿ ಮುಖಂಡ ರಾಜೇಶ್ ನ ಮೇಲಿನ ಹಲ್ಲೆಯ ಹಿಂದೆ ಕೊಲೆಯ ಪ್ರಯತ್ನ ನಡೆದಿದೆ ಎಂಬುವುದು ಸ್ಪಷ್ಟ. ಜಾತಿ ನಿಂದನೆಯನ್ನು ಕುಶಾಲಪ್ಪ ಗೌಡ ರವರು ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸನ್ನು ಹಾಕುವುದರ ಮೂಲಕ ಸುಳ್ಳಿನ ಕಂತೆಗಳ ಸುರಿಮಳೆ ಇವತ್ತು ಆಗುತ್ತಿದೆ. ಪರಿಶಿಷ್ಟ ಪಂಗಡದ ವ್ಯಕ್ತಿಗೆ ಈ ರೀತಿ ಮಾಡ್ತಾರೆ ಎಂದಾದರೆ ಇನ್ನೂ ಸಾಮಾನ್ಯ ಜನರ ಕಥೆ ಏನು?, ಈ ರೀತಿಯ ಕೀಳು ಮಟ್ಟದ ರಾಜಕೀಯವನ್ನು ನಾನು ನೋಡಿಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ ಕೋಟ್ಯಾನ್, ರಾಜ್ಯ ಸಮಿತಿ ಸದಸ್ಯ ಕೊರಗಪ್ಪ ನಾಯ್ಕ, ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ ಉಪಸ್ಥಿತರಿದ್ದರು.

Related posts

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ವತ್ ಸನ್ಮಾನ ಕಾರ್ಯಕ್ರಮ

Suddi Udaya

ನೆರಿಯ : ಮನೆಯಂಗಳದಲ್ಲಿ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕು ಮಟ್ಟದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಶಿರ್ಲಾಲು: ಉರುಂಬಿದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya

ಬಿಜೆಪಿ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಭಾಗಿ

Suddi Udaya
error: Content is protected !!