26.5 C
ಪುತ್ತೂರು, ಬೆಳ್ತಂಗಡಿ
September 19, 2026
Uncategorized

ಜೂ.12 ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ

ಬೆಳ್ತಂಗಡಿ: ಜೂ.12 ರಂದು ಬೆಳಿಗ್ಗೆ 11 ಗಂಟೆಯಿಂದ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ ಜರುಗಲಿದೆ.

ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು,ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸುತ್ತಾರೆ ಸರಕಾರಿ ಕಛೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಉಳಿದ ದಿನಗಳಲ್ಲೂ ಕಛೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ.

ಅರ್ಜಿದಾರರು ನಮೂನೆ 1 ಹಾಗೂ II ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಕಛೇರಿಗೆ ಅಥವಾ ನೇರವಾಗಿ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ.ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬಹುದು ಎಂದು ಮಂಗಳೂರು ಲೋಕಾಯುಕ್ತಪೊಲೀಸ್ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.

Related posts

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಆಲ್ವಿನ್ ರೊಡ್ರಿಗಸ್ ಪಾರೆಂಕಿ ಬಂಧನ

Suddi Udaya

ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು-ಬಜಿರೆ – ಎ. 2: ಶ್ರೀ ರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ – ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಚಾವಣಿ ಲೋಕಾರ್ಪಣೆ ಹಾಗೂ ಕೊರಗಜ್ಜ ದೈವದ ನೇಮೋತ್ಸವ

Suddi Udaya

ಅಯೋಧ್ಯೆ ಬಾಲರಾಮನ ಮೂರ್ತಿ ಕೆತ್ತನೆ ಕಾರ್ಯ ನಿರ್ವಹಿಸಿರುವ ನಾಳದ ಶಿಲ್ಪಿ ಜಯಚಂದ್ರ ಆಚಾರ್ಯರವರಿಗೆ ಬೆಳ್ತಂಗಡಿ ಗುರು ಸೇವಾ ಪರಿಷತ್ ಘಟಕದಿಂದ ಗೌರವಾರ್ಪಣೆ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ವಿಶ್ವ ಯೋಗ ದಿನ ಆಚರಣೆ

Suddi Udaya

ಭಾ.ಜ.ಪಾ ಬೆಳ್ತಂಗಡಿ ಮಂಡಲ ವತಿಯಿಂದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ

Suddi Udaya
error: Content is protected !!