May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಜೂ.5 ರಂದು ಆಚರಿಸಲಾಯಿತು.


ಮುಖ್ಯ ಅತಿಥಿಯಾಗಿ ಪುದುವೆಟ್ಟು ಗ್ರಾಮಪಂಚಾಯತ್ ನ ಮಾಜಿ ಸದಸ್ಯರಾದ ರೋಯಿ ಜೋಸೆಫ್ ಮಾತನಾಡಿ ಪರಿಸರ ನಾಶದಿಂದ ದೇಶದಲ್ಲಿ ಆಗುವ ಬದಲಾವಣೆ ಮತ್ತು ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಸುದೀರ್ಘವಾದ ಮಾಹಿತಿಯನ್ನು ನೀಡಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡರವರು ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪಾತ್ರದ ಬಗ್ಗೆ ತಿಳಿಸಿದರು.


ಶಾಲೆಯ ಶಿಕ್ಷಕ ಪವನ್ ಕುಮಾರ್ ರವರು ಪರಿಸರ ದಿನಾಚರಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಪರಿಸರ ದಿನಾಚರಣೆಗೆ ಸಂಬಂಧಪಟ್ಟ ಭಾಷಣ ಹಾಗೂ ಹಾಡುಗಳನ್ನು ಪ್ರಸ್ತುತಪಡಿಸಲಾಯಿತು. ವಿದ್ಯಾರ್ಥಿಗಳು ಪ್ರಾರ್ಥಿಸಿ, ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕಿ ಶ್ರೀಮತಿ ಸುಜಾತಾ ಸ್ವಾಗತಿಸಿ, ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಶೀಲಾ ಎನ್ ಧನ್ಯವಾದವಿತ್ತರು. ಕಾರ್ಯಕ್ರಮವನ್ನು ಶಾಲೆಯ ಶಿಕ್ಷಕಿ ಶ್ರೀಮತಿ ಪುಷ್ಪಲತಾ ರವರು ನಿರೂಪಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಆಪರೇಷನ್ ಸಿಂದೂರ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಹೆತ್ತವರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಗುರುವಾಯನಕೆರೆ ವೈಭವ್ ಹಾರ್ಡ್ ವೇರ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ಮಂಗಳೂರು ಕಸ್ತೂರ್ಬಾ ವೈದ್ಯಕೀಯ ಕಾಲೇಜು ಆಸ್ಪತ್ರೆಯ ತಜ್ಞ ವೈದ್ಯರು ಮತ್ತು ಪ್ರೊಫೆಸರ್ ಗಳ ತಂಡ ಭೇಟಿ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya
error: Content is protected !!