28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಜೂ.5 ರಂದು ಆಚರಿಸಲಾಯಿತು.


ಮುಖ್ಯ ಅತಿಥಿಯಾಗಿ ಪುದುವೆಟ್ಟು ಗ್ರಾಮಪಂಚಾಯತ್ ನ ಮಾಜಿ ಸದಸ್ಯರಾದ ರೋಯಿ ಜೋಸೆಫ್ ಮಾತನಾಡಿ ಪರಿಸರ ನಾಶದಿಂದ ದೇಶದಲ್ಲಿ ಆಗುವ ಬದಲಾವಣೆ ಮತ್ತು ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಸುದೀರ್ಘವಾದ ಮಾಹಿತಿಯನ್ನು ನೀಡಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡರವರು ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಪಾತ್ರದ ಬಗ್ಗೆ ತಿಳಿಸಿದರು.


ಶಾಲೆಯ ಶಿಕ್ಷಕ ಪವನ್ ಕುಮಾರ್ ರವರು ಪರಿಸರ ದಿನಾಚರಣೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಪರಿಸರ ದಿನಾಚರಣೆಗೆ ಸಂಬಂಧಪಟ್ಟ ಭಾಷಣ ಹಾಗೂ ಹಾಡುಗಳನ್ನು ಪ್ರಸ್ತುತಪಡಿಸಲಾಯಿತು. ವಿದ್ಯಾರ್ಥಿಗಳು ಪ್ರಾರ್ಥಿಸಿ, ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕಿ ಶ್ರೀಮತಿ ಸುಜಾತಾ ಸ್ವಾಗತಿಸಿ, ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಶೀಲಾ ಎನ್ ಧನ್ಯವಾದವಿತ್ತರು. ಕಾರ್ಯಕ್ರಮವನ್ನು ಶಾಲೆಯ ಶಿಕ್ಷಕಿ ಶ್ರೀಮತಿ ಪುಷ್ಪಲತಾ ರವರು ನಿರೂಪಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ವೇಣೂರು;ಪಡ್ಡoದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

Suddi Udaya

ವೇಣೂರಿನಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಾರ್ಯಲಯ ಉದ್ಘಾಟನೆ

Suddi Udaya

ಸಾಮಾಜಿಕ ಜಾಲತಾಣಗಳ ಮುಖಾಂತರ ಸುಳ್ಳು ಸುದ್ದಿಗಳನ್ನು ಹರಡುತ್ತಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಕಾಂಗ್ರೆಸ್ ಜಿಲ್ಲಾ ಸಾಮಾಜಿಕ ಜಾಲಾತಾಣ ವಿಭಾಗದ ಪ್ರಧಾನ ಕಾರ್ಯದರ್ಶಿ ಗಣೇಶ್ ರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಉಜಿರೆ: ಹೊಳೆಯಂತಾದ ಉಜಿರೆ ಹಳೆಪೇಟೆ ರಸ್ತೆ, ಹಲವೆಡೆ ಅಂಗಡಿಗೆ ನುಗ್ಗಿದ ನೀರು, ಶಾಶ್ವತ ಪರಿಹಾರಕ್ಕೆ ಆಗ್ರಹ

Suddi Udaya
error: Content is protected !!