28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಮುಖಂಡ ರಾಜೇಶ್ ಕೊಲೆ ಯತ್ನ ಪ್ರಕರಣ: ಆರೋಪಿ ಕುಶಾಲಪ್ಪ ಗೌಡ ಬಂಧನ

ಬೆಳ್ತಂಗಡಿ : ಬಿಜೆಪಿ ಬೆಳ್ತಂಗಡಿ ತಾಲೂಕು ಮಂಡಲದ ಎಸ್ ಟಿ ಮೋರ್ಚಾದ ಅಧ್ಯಕ್ಷ, ರಾಜೇಶ್ ಎಂ.ಕೆ(33) ಮೇಲೆ ಜೂ.4 ರಂದು ರಾತ್ರಿ ಕೊಲೆ ಯತ್ನ ನಡೆಸಿದ ಆರೋಪಿ ಕುಶಾಲಪ್ಪ ಗೌಡರವರನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಳೆಂಜ ಗ್ರಾಮದ ಕಾಯರ್ತಡ್ಕ ಕಾಂಗ್ರೆಸ್ ಮುಖಂಡ ಕಳೆಂಜ ನಿವಾಸಿ ಕುಶಾಲಪ್ಪ ಗೌಡ ಕಜೆ(48) ಎಂಬಾತನು ರಾಜೇಶ್ ಎಂ.ಕೆ ಮೇಲೆ ಕ್ಷುಲ್ಲಕ ಕಾರಣಕ್ಕೆ ಜಾತಿ ನಿಂದನೆ ಮಾಡಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ, ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.5 ರಂದು ಆರೋಪಿ ಕುಶಾಲಪ್ಪ ಗೌಡ ನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ಮಂಗಳೂರು ಸೆಷನ್ಸ್ ಕೋರ್ಟ್ ನ್ಯಾಯಧೀಶರ ಮನೆಗೆ ರಾತ್ರಿ ಹಾಜರುಪಡಿಸಿದ್ದು, ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಹಲ್ಲೆಗೊಳಾಗಾಗಿ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ರಾಜೇಶ್.ಎಂ.ಕೆ ನೀಡಿದ ದೂರಿನ ಮೇರೆಗೆ ಅಟ್ರಾಸಿಟಿ, ಕೊಲೆ ಯತ್ನ, ದರೋಡೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಕುತ್ಲೂರು: ಮಳೆಗೆ ಕುಸಿದ ಸೇತುವೆ ಪರೀಶಿಲನೆ ನಡೆಸಿದ ಜಿಲ್ಲಾಧಿಕಾರಿ

Suddi Udaya

ಮೊಗ್ರು ಶ್ರೀರಾಮ ಶಿಶುಮಂದಿರದಲ್ಲಿ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರ ಸಮಾರೋಪ

Suddi Udaya

ಲಾಯಿಲ: ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಅಕ್ರಮವಾಗಿ ಮಾದಕ ವಸ್ತು ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಅಂಝದ್‌ನನ್ನು ಬಂಧಿಸಿದ ಪುತ್ತೂರು ಪೊಲೀಸರು

Suddi Udaya

ಮುಗೇರಡ್ಕ ದೈವಸ್ಥಾನ ವತಿಯಿಂದ ಅಲೆಕ್ಕಿ ಶಿಶುಮಂದಿರಕ್ಕೆ ಧನ ಸಹಾಯ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸಮರ ಸನ್ನಾಹ ತಾಳಮದ್ದಳೆ

Suddi Udaya
error: Content is protected !!