ರಾಜೇಶ್ ಎಂ.ಕೆ ಯವರ ಮೇಲೆ ನಡೆದ‌ ತಲ್ವಾರ್ ದಾಳಿ ಕೊಲೆ ಯತ್ನಕ್ಕೆ ಖಂಡನೆ: ದಲಿತ ದೌರ್ಜನ್ಯ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲು : ಎಸ್ .ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಠಲ ಕುಲೆ೯ ಆಗ್ರಹ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಬಿಜೆಪಿ ಯ ತಾಲೂಕು ಎಸ್.ಟಿ ಮೋರ್ಚಾದ ಅಧ್ಯಕ್ಷರಾದ ರಾಜೇಶ್ ಎಂ.ಕೆ ಯವರ ಮೇಲೆ ಕಾಂಗ್ರೆಸ್ ಕಾರ್ಯಕರ್ತನಿಂದ ನಡೆದ‌ ತಲ್ವಾರಿನಿಂದ ದಾಳಿ ಮಾಡಿ ಕೊಲೆಗೆ ಯತ್ನವನ್ನು ಖಂಡಿಸುವುದಾಗಿ ಬೆಳ್ತಂಗಡಿ ತಾಲೂಕು ಬಿಜೆಪಿ ಎಸ್ .ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಠಲ ಕುಲೆ೯ ಕೊಕ್ಕಡ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ದಲಿತರ ಮೇಲೆ ದೌರ್ಜನ್ಯ ಹೆಚ್ಚುತ್ತಿದೆ ಹಾಗೂ ಒಂದು ಕಡೆಯಲ್ಲಿ ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ಇನ್ನೊಂದು ಕಡೆಯಲ್ಲಿ ಬಿಜೆಪಿಯಲ್ಲಿ ಗುರುತಿಸಿಕೊಂಡ ಪರಿಶಿಷ್ಟ ಪಂಗಡದ ಯುವ ನಾಯಕನ. ಮೇಲೆ ದೌರ್ಜನ್ಯ..
ಎತ್ತ ಸಾಗುತ್ತಿಗೆ ರಾಜ್ಯದ ಕಾನೂನು ಸುವ್ಯವಸ್ಥೆ ಪ್ರಕರಣಕ್ಕೆ ಸಂಬಂಧ ಪಟ್ಟ ಆರೋಪಿಯನ್ನು ಶೀಘ್ರವಾಗಿ ಬಂಧಿಸುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡಬೇಕಿದೆ ಹಾಗೂ ಆರೋಪಿಯ ವಿರುದ್ದ ದಲಿತ ದೌರ್ಜನ್ಯ ಕಾಯ್ದೆಯಡಿಯಲ್ಲಿ ಮತ್ತು ಐಪಿಸಿ ಸೆಕ್ಷನ್ 307ರಡಿಯಲ್ಲಿ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Leave a Comment

error: Content is protected !!