May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುನ್ನತ್ ಕೆರೆ ಅಲ್ ಮಸ್ಜಿದುಲ್ ಹುದಾ ಜುಮಾ‌ ಮಸ್ಜಿದ್ ನ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ; ಅಲ್ ಮಸ್ಜಿದುಲ್ ಹುದಾ ಜುಮಾ‌ ಮಸ್ಜಿದ್ ಸುನ್ನತ್ ಕೆರೆ ಇದರ ವಾರ್ಷಿಕ ಮಹಾಸಭೆಯು ಬುಸ್ತಾನುಲ್ ಉಲೂಂ ಸೆಕೆಂಡರಿ ಮದರಸ ಸುನ್ನತ್ ಕೆರೆ ಸಭಾಂಗಣದಲ್ಲಿ ಜರುಗಿದ್ದು ನೂತನ ಆಡಳಿತ ಸಾಲಿನ ಅಧ್ಯಕ್ಷರಾಗಿ ಅಬ್ದುಲ್ ಹಕೀಂ ಸುನ್ನತ್‌ಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಖಲಂದರ್ ಬಿ.ಹೆಚ್, ಕೋಶಾಧಿಕಾರಿಯಾಗಿ ಅಬ್ಬಾಸ್ ಹಾಜಿ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಮಿತಿ ಗೌರವಾಧ್ಯಕ್ಷರಾಗಿ ಅಬ್ದುರ್ರಹ್ಮಾನ್ ಹಾಜಿ, ಉಪಾಧ್ಯಕ್ಷರರುಗಳಾಗಿ ಸ್ವಾದಿಕ್ ಸಾಹೇಬ್ ಮತ್ತು ಇಲ್ಯಾಸ್ ಎಸ್.ಕೆ, ಜೊತೆ ಕಾರ್ಯದರ್ಶಿಯಾಗಿ ಇಕ್ಬಾಲ್ ಫಿಶ್ ಹಾಗೂ ಲೆಕ್ಕಪರಿಶೋಧಕರಾಗಿ ಜಿ.ಎಂ ತಾಜುದ್ದೀನ್ ಇವರು ಆಯ್ಕೆಯಾದರು.

ಜಮಾಅತ್ ಖತೀಬ್ ಎಂ.ಕೆ ಅಬುಬಕ್ಕರ್ ಸಿದ್ದೀಕ್ ಹಿಮಮಿ ಅಲ್ ಫುರ್ಖಾನಿ ರಶಾದಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಯಂಗ್-ಮೆನ್ಸ್ ಪ್ರ.ಕಾರ್ಯದರ್ಶಿ ಜಿ.ಎಂ ತಾಜುದ್ದೀನ್ ಸ್ವಾಗತಿಸಿದರು. ಜಮಾಅತ್ ಪ್ರ.ಕಾರ್ಯದರ್ಶಿ ಶಮೀರ್ ಪ್ಲಾಸ್ಟಿಕ್ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರ ಮಂಡಿಸಿದರು.

ಮಹಾಸಭೆಯ ಬಳಿಕ ನೂತನ ದಾಖಲೆ ಪತ್ರಗಳನ್ನು ಹಸ್ತಾಂತರ ಮಾಡುವ ಮೂಲಕ ಅಧಿಕಾರ ಪದಗ್ರಹಣವೂ ನಡೆಯಿತು.

Related posts

ಲಾಯಿಲ: ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ ನಿಧನ

Suddi Udaya

ಯಕ್ಷಭಾರತಿಯಿಂದ ಶೋಭಾ ಸುರೇಶ ಕುದ್ರೆಂತ್ತಾಯರಿಗೆ ಗೌರವಾರ್ಪಣೆ ಮತ್ತು ತಾಳಮದ್ದಳೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25 ಸಾವಿರ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ : ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ “ನಂದಗೋಕುಲ” ಸ್ವ-ಸಹಾಯ ಸಂಘದ ರಚನೆ

Suddi Udaya

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

Suddi Udaya

ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ರಸ್ತೆ ಸಂಚಾರ ಸುರಕ್ಷತಾ ಜಾಗೃತಿ’ ಕಾರ್ಯಕ್ರಮ

Suddi Udaya
error: Content is protected !!