30.1 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುನ್ನತ್ ಕೆರೆ ಅಲ್ ಮಸ್ಜಿದುಲ್ ಹುದಾ ಜುಮಾ‌ ಮಸ್ಜಿದ್ ನ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ; ಅಲ್ ಮಸ್ಜಿದುಲ್ ಹುದಾ ಜುಮಾ‌ ಮಸ್ಜಿದ್ ಸುನ್ನತ್ ಕೆರೆ ಇದರ ವಾರ್ಷಿಕ ಮಹಾಸಭೆಯು ಬುಸ್ತಾನುಲ್ ಉಲೂಂ ಸೆಕೆಂಡರಿ ಮದರಸ ಸುನ್ನತ್ ಕೆರೆ ಸಭಾಂಗಣದಲ್ಲಿ ಜರುಗಿದ್ದು ನೂತನ ಆಡಳಿತ ಸಾಲಿನ ಅಧ್ಯಕ್ಷರಾಗಿ ಅಬ್ದುಲ್ ಹಕೀಂ ಸುನ್ನತ್‌ಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಖಲಂದರ್ ಬಿ.ಹೆಚ್, ಕೋಶಾಧಿಕಾರಿಯಾಗಿ ಅಬ್ಬಾಸ್ ಹಾಜಿ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಮಿತಿ ಗೌರವಾಧ್ಯಕ್ಷರಾಗಿ ಅಬ್ದುರ್ರಹ್ಮಾನ್ ಹಾಜಿ, ಉಪಾಧ್ಯಕ್ಷರರುಗಳಾಗಿ ಸ್ವಾದಿಕ್ ಸಾಹೇಬ್ ಮತ್ತು ಇಲ್ಯಾಸ್ ಎಸ್.ಕೆ, ಜೊತೆ ಕಾರ್ಯದರ್ಶಿಯಾಗಿ ಇಕ್ಬಾಲ್ ಫಿಶ್ ಹಾಗೂ ಲೆಕ್ಕಪರಿಶೋಧಕರಾಗಿ ಜಿ.ಎಂ ತಾಜುದ್ದೀನ್ ಇವರು ಆಯ್ಕೆಯಾದರು.

ಜಮಾಅತ್ ಖತೀಬ್ ಎಂ.ಕೆ ಅಬುಬಕ್ಕರ್ ಸಿದ್ದೀಕ್ ಹಿಮಮಿ ಅಲ್ ಫುರ್ಖಾನಿ ರಶಾದಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಯಂಗ್-ಮೆನ್ಸ್ ಪ್ರ.ಕಾರ್ಯದರ್ಶಿ ಜಿ.ಎಂ ತಾಜುದ್ದೀನ್ ಸ್ವಾಗತಿಸಿದರು. ಜಮಾಅತ್ ಪ್ರ.ಕಾರ್ಯದರ್ಶಿ ಶಮೀರ್ ಪ್ಲಾಸ್ಟಿಕ್ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರ ಮಂಡಿಸಿದರು.

ಮಹಾಸಭೆಯ ಬಳಿಕ ನೂತನ ದಾಖಲೆ ಪತ್ರಗಳನ್ನು ಹಸ್ತಾಂತರ ಮಾಡುವ ಮೂಲಕ ಅಧಿಕಾರ ಪದಗ್ರಹಣವೂ ನಡೆಯಿತು.

Related posts

ಧರ್ಮಸ್ಥಳ: ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಡಿ.16: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya

ಕೊಕ್ಕಡ ಹಿಂದೂ ಸಂಗಮ ಸಮಾವೇಶದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya

ದೆಹಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಉಜಿರೆ ಗ್ರಾ. ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪಿಡಿಓ ಪ್ರಕಾಶ್ ಶೆಟ್ಟಿ ಭಾಗಿ

Suddi Udaya
error: Content is protected !!