25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

“ಸುರ್ಯ ದೇವಸ್ಥಾನದ ವಠಾರದಲ್ಲಿ “ವಿಶ್ವ ಪರಿಸರ ದಿನಾಚರಣೆ “

ಬೆಳ್ತಂಗಡಿ:ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಸದಾಶಿವರುದ್ರ ದೇವಸ್ಥಾನದ ವಠಾರದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ಬೆಳ್ತಂಗಡಿ ವಲಯ ಹಾಗೂ ಸುರ್ಯ ದೇವಸ್ಥಾನದ ಆಶ್ರಯದಲ್ಲಿ “ವಿಶ್ವ ಪರಿಸರ ದಿನ ” ಆಚರಿಸಲಾಯಿತು. ಸುರ್ಯ ದೇವಸ್ಥಾನದ ಆನುವಂಶಿಯ ಆಡಳಿತ ಮೊಕ್ತೇಸರ ಡಾ. ಸತೀಶ್ಚಂದ್ರ ಸುರ್ಯಗುತ್ತು ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಡಾ. ಸತೀಶ್ಚಂದ್ರ ಹಾಗೂ ವಿದ್ಯಾ. ಪಿ. ಡಿ. ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ (ಸಾಮಾಜಿಕ ಅರಣ್ಯ ಇಲಾಖೆ ) ಇವರು ಪರಿಸರ ಸಂರಕ್ಷಣೆ ಹಾಗೂ ಸಾಮಾಜಿಕ ಅರಣ್ಯಕರಣದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಅರಣ್ಯಧಿಕಾರಿ ಅಶೋಕ್, ಇಲಾಖೆ ಸಿಬ್ಬಂದಿ ಶೇಖರ ಗೌಡ, ನಡ ಪಂಚಾಯತ್ ಮಾಜಿ ಅಧ್ಯಕ್ಷ ಮುನಿರಾಜ ಅಜ್ರಿ, ಪ್ರಸಾದ್, ಸುಂದರ ನಾಯ್ಕ, ಪದ್ಮನಾಭ ಗೌಡ, ಯೋಗೀಶ್ ಪೂಜಾರಿ ಹಾಜರಿದ್ದರು. ಮಾವು, ಹೆಬ್ಬಲಸು, ಸಂಪಿಗೆ, ನೇರಳೆ, ಶ್ರೀಗಂಧ, ಸೊರಗೆ , ಹೊಳೆ ದಾಸವಾಳ ಇತ್ಯಾದಿ ವಿವಿಧ ಬಗೆಯ ನೂರು ಗಿಡಗಳನ್ನು ಸುರ್ಯ ದೇವಸ್ಥಾನದ ವಠಾರದಲ್ಲಿ ನೆಡಲಾಯಿತು.

Related posts

ವಿಧಾನಸಭೆ ಚುನಾವಣೆ ಹಿನ್ನೆಲೆ ವಿವಿಧ ಚೆಕ್ ಪೋಸ್ಟ್ ಗಳಿಗೆ ಮತ್ತು ನಕ್ಸಲ್ ಪೀಡಿತ ಪ್ರದೇಶಗಳಿಗೆಭೇಟಿ

Suddi Udaya

ಎಸ್‌ಡಿಎಂ ಮಹಾವಿದ್ಯಾಲಯ: ಅಂತರ್ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಗೆ ಚಾಲನೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಆರಂಬೋಡಿ ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ನೀರಚಿಲುಮೆ ಸಮೀಪದ ಕಾಡಿನಲ್ಲಿ ಆಕಸ್ಮಿಕ ಬೆಂಕಿ

Suddi Udaya

ನಾಡಿನಾದ್ಯಂತ ನವರಾತ್ರಿ ಸಂಭ್ರಮ; ಕರಾವಳಿಯಲ್ಲಿ ಮಾರ್ನೆಮಿ ವೇಷಗಳ ಸದ್ದು ಆರಂಭ

Suddi Udaya
error: Content is protected !!