25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪರಿಸರ ದಿನಾಚರಣೆ

ಉಜಿರೆ : ನಾವು ಈಗ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆಗೆ ಭೂಮಿಯಲ್ಲಿ ಜೀವಿಸಲು ಕಷ್ಟವಾಗಬಹುದು ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಎಡ್) ಉಜಿರೆ ಇಲ್ಲಿ ನಡೆದ ಪರಿಸರ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ರತ್ನಮಾನಸ ವಿದ್ಯಾರ್ಥಿ ನಿಲಯದ ನಿಲಯಪಾಲಕ ಯತೀಶ್ ಕೆ ಬಳಂಜ ನುಡಿದರು.


ಈಗಿನ ಕಾಲದಲ್ಲಿ ಗಿಡ ನೆಡುವುದು ಕೇವಲ ಪರಿಸರ ದಿನಾಚರಣೆಗೆ ಸೀಮಿತವಾಗಿದೆ. ಪರಿಸರ ನಾಶದಿಂದಾಗಿ, ತಾಪಮಾನದ ಏರಿಕೆ ಮಾತ್ರವಲ್ಲ ಕಾಡಿನಲ್ಲಿನ ಪ್ರಾಣಿಗಳನ್ನು ನಾಡಿನಲ್ಲಿ ಕಾಣುತ್ತಿದ್ದೇವೆ ಹಾಗೂ ವಿವಿಧ ರೀತಿಯ ಆಶ್ರಯ ನೀಡುವ ಆರೋಗ್ಯಕರ ಹಣ್ಣಿನ ಮರಗಳ ಸಂಖ್ಯೆ ಈಗ ಕಡಿಮೆಯಾಗಿದೆ. ಪರಿಸರ ನಾಶಕ್ಕೆ ಮುಖ್ಯ ಕಾರಣ ಅನಕ್ಷರಸ್ಥರು ಅಲ್ಲ, ಅಕ್ಷರಸ್ಥರ ಅಹಂಕಾರ. ನಮಗೆ ಪುಸ್ತಕ ಮಾತ್ರ ಪ್ರಪಂಚವಲ್ಲ. ಪರಿಸರವನ್ನು ಓದಬೇಕು, ಅಭ್ಯಾಸ ಮಾಡಬೇಕು ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಆಲ್ಬರ್ಟ್ ಸಾಲ್ಡಾನ ಇವರು ಮಾತನಾಡುತ್ತಾ ವಿವಿಧ ಗಿಡಗಳನ್ನು ನೆಟ್ಟರೆ ಭೂಮಿಯನ್ನು ಸ್ವರ್ಗ ಮಾಡಬಹುದು ಎಂಬ ಮಾತಿನಂತೆ ಅತೀ ಹೆಚ್ಚು ಉಪಯೋಗಕ್ಕೆ ಬರುವ ಗಿಡಗಳನ್ನು ನೆಟ್ಟರೆ ಇರುವ ಒಂದೇ ಭೂಮಿಯನ್ನು ಸ್ವರ್ಗ ಮಾಡಬಹುದು. ನಮ್ಮಿಂದ ಗಿಡ-ಮರ ಬೆಳೆಯಬೇಕು. ಮರಗಳಿಗೂ ಮಾನವರಿಗೂ ಸಂಪರ್ಕವಿರಬೇಕು. ಆಗ ಮಾತ್ರ ಪರಿಸರವು ಮುಂದಿನ ಜನಾಂಗಕ್ಕೆ ಉಳಿಯುತ್ತದೆ. ಇದು ನಮ್ಮ ಆದ್ಯ ಕರ್ತವ್ಯ ಎಂದು ಹೇಳಿದರು.


ನಂತರ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಅದ್ಭುತ ಅರ್ಥ ನೀಡುವ ಪರಿಸರ ಗೀತೆಯನ್ನು ಹಾಡಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ತಿರುಮಲೇಶ್ ರಾವ್ ಎನ್ ಕೆ, ವಿದ್ಯಾಶ್ರೀ ಪಿ, ಅನುಷಾ ಡಿ.ಜೆ, ಚೈತ್ರ ಹಾಗೂ ಪ್ರಥಮ ಮತ್ತು ದ್ವಿತೀಯ ಬಿ.ಎಡ್. ನ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.


ಪ್ರಥಮ ಬಿ.ಇಡಿ. ಯ ಪ್ರಶಿಕ್ಷಣಾರ್ಥಿಗಳಾದ ವಿಶಾಲ ಸ್ವಾಗತಿಸಿ, ದಿವ್ಯ ಕೆ ಎಸ್ ವಂದಿಸಿ, ರಾಫಿಯಾ ಅತಿಥಿ ಪರಿಚಯಿಸಿ, ರಶ್ಮಿ ಕಾರ್ಯಕ್ರಮ ನಿರೂಪಿಸಿದರು.

Related posts

ಪದ್ಮುಂಜ ಶ್ರೀ ಗೌರಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕ ಕಾರ್ಯಕ್ರಮ

Suddi Udaya

ಕುತ್ಲೂರು: ಬಜಿಲಪಾದೆಯಲ್ಲಿ ಚಿರತೆ ಪತ್ತೆ

Suddi Udaya

ಉಜಿರೆ: ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ & ಕಾಸ್ಟ್ಯೂಮ್ ಕಾರ್ನರ್ ಶುಭಾರಂಭ

Suddi Udaya

ಉಳ್ತೂರಿನಲ್ಲಿ ಶಾಂತಿಯುತ ಬಕ್ರೀದ್ ಆಚರಣೆ

Suddi Udaya

ಕೊಕ್ಕಡ ಪರಿಸರದಲ್ಲಿ ಭೀಕರ ಬಿರುಗಾಳಿ ಮಳೆ: ಮರ ಉರುಳಿ ಬಿದ್ದರೂ ಹಾನಿಯಾಗದ ದೈವದ ಗುಡಿ: ದೈವಗಳ ಕಾನಿ೯ಕ ಭಕ್ತರ‌ ಅನಿಸಿಕೆ

Suddi Udaya

ಫೆ.14: ಕರಂಬಾರು ಬೊಟ್ಯೆಲ್ಮಾರಿನಲ್ಲಿ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ನೇಮೋತ್ಸವ

Suddi Udaya
error: Content is protected !!