28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಕ್ಷರ ಕಲಿಸುವ ವಿದ್ಯಾ ದೇಗುಲಕ್ಕೆ ಖದೀಮರ ಕನ್ನ, ಕಣಿಯೂರಿನ ಪಿಲಿಗೂಡು ಶಾಲೆ ಬೀಗ ಒಡೆದು‌ ಕಳ್ಳತನ:

ಪಿಲಿಗೂಡು: ಕಣಿಯೂರು ಗ್ರಾಮದ ಪಿಲಿಗೂಡಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳ್ಳತನ ನಡೆದಿದ್ದು, ಖದೀಮರು ಶಾಲೆಯ ಬೀಗ ಒಡೆದು ಮಿಕ್ಸಿ, ಗ್ಯಾಸ್ ಹಂಡೆ ದೋಚಿದ್ದಾರೆ.


ಜೂ5 ರಂದು ರಾತ್ರಿ ಘಟನೆ ನಡೆದಿದ್ದು, ಮೊದಲಿಗೆ ಅಕ್ಷರ ದಾಸೋಹ ಕೊಠಡಿಗೆ ನುಗ್ಗಿ ಅಲ್ಲಿಂದ ಗ್ಯಾಸ್ ಹಂಡೆ ಹಾಗೂ ಸುಮಾರು 8 ಸಾವಿರ ರೂ ಮೌಲ್ಯದ ಹೊಸ ಮಿಕ್ಸಿಯನ್ನು ಕದ್ದಿದ್ದಾರೆ. ಬಳಿಕ ಅಲ್ಲಿಯೇ ಇದ್ದ ಪಿಕ್ಕಾಸಿನಿಂದ ಮುಖ್ಯಶಿಕ್ಷಕರ ಕಚೇರಿಯನ್ನು ಒಡೆದು ಬಳಿಕ ಅಲ್ಲಿದ್ದ ಕಪಾಟನ್ನು ಜಾಲಾಡಿದ್ದಾರೆ. ಬಳಿಕ ತರಗತಿಗಳಲ್ಲಿಯೂ ಹುಡುಕಾಟ ನಡೆಸಿದ್ದಾರೆ. ಬೆಳಗ್ಗೆ ಶಾಲಾ ಮಕ್ಕಳು ಬೀಗ ತೆರೆಯಲು ಬಂದ ವೇಳೆ ಘಟನೆ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.


ಘಟನೆ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಉಪ್ಪಿನಂಗಡಿ‌ ಠಾಣೆಯ ಎಸ್ಐ ಅವಿನಾಶ್ ಅವರು ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.


ಪಿಲಿಗೂಡು ಪರಿಸರದಲ್ಲಿ ಸಣ್ಣಪುಟ್ಟ ಕಳ್ಳತನ ನಡೆದಿದ್ದು, ದೂರು ನೀಡುವ ಹಂತಕ್ಕೆ ತಲುಪಿರಲಿಲ್ಲ. ಇದೀಗ ವಿದ್ಯಾ ದೇಗುಲವಾದ ಶಾಲೆಗೆ ಖದೀಮರು ಎಂಟ್ರಿ ಕೊಟ್ಟಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ‌. ಪಿಲಿಗೂಡು ಮೂಲಕ ಬಳ್ಳಮಂಜ, ಕಕ್ಯಪದವು ಅದೇರೀತಿ ಪದ್ಮುಂಜ, ಬಂದಾರು, ನೆಕ್ಕಿಲು, ಕುಪ್ಪೆಟ್ಟಿ ಮೊದಲಾದ ಕಡೆ ಸಂಪರ್ಕಿಸುವ ರಸ್ತೆ ಇದ್ದು ಅಕ್ರಮ ಕೆಲಸ ಎಸಗುವವರಿಗೆ ಉತ್ತಮ ತಾಣ ಎಂಬಂತಾಗಿದೆ ಪೊಲೀಸರು ಈ ಭಾಗದಲ್ಲಿಯೂ ಗಸ್ತು ಹೆಚ್ಚಿಸಬೇಕು ಎಂಬ ಮಾತುಗಳೂ ಕೇಳಿ ಬರುತ್ತಿವೆ. ಶಾಲೆಯ ಸಮೀಪದಲ್ಲೇ ಉದ್ಯಮಿಯೊಬ್ಬರ ಮನೆ ಇದ್ದು, ಮುಂದೆ ಇಂತಹ ಅಹಿತಕರ ಘಟನೆ ನಡೆಯದಿರಲಿ, ಕಳ್ಳರನ್ನು ಬೇಗನೇ ಪತ್ತೆ ಹಚ್ಚಿ ಶಿಕ್ಷಿಸಲಿ ಎನ್ನುವುದು ಸಾರ್ವಜನಿಕರ ಆಶಯವಾಗಿದೆ.

Related posts

ಮರದಿಂದ ಬಿದ್ದು ಸಾವು

Suddi Udaya

ನಾಳೆ ಎ.21 ದ್ವೀತಿಯ ಪಿಯುಸಿ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಂದ ಶಿಲಾನ್ಯಾಸ

Suddi Udaya

ಗುರುವಾಯನಕೆರೆ : ವೈಟ್‌ಹೌಸ್ ನಿವಾಸಿ ನಾರಾಯಣ ಪೂಜಾರಿ

Suddi Udaya

ಕರಿಮಣೇಲು ಸಂತ ಜೂಡರ ಶಾಲೆಯಲ್ಲಿ ಶ್ರೀ ಧವಳ ಕಾಲೇಜಿನ ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!