May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಕ್ಷರ ಕಲಿಸುವ ವಿದ್ಯಾ ದೇಗುಲಕ್ಕೆ ಖದೀಮರ ಕನ್ನ, ಕಣಿಯೂರಿನ ಪಿಲಿಗೂಡು ಶಾಲೆ ಬೀಗ ಒಡೆದು‌ ಕಳ್ಳತನ:

ಪಿಲಿಗೂಡು: ಕಣಿಯೂರು ಗ್ರಾಮದ ಪಿಲಿಗೂಡಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳ್ಳತನ ನಡೆದಿದ್ದು, ಖದೀಮರು ಶಾಲೆಯ ಬೀಗ ಒಡೆದು ಮಿಕ್ಸಿ, ಗ್ಯಾಸ್ ಹಂಡೆ ದೋಚಿದ್ದಾರೆ.


ಜೂ5 ರಂದು ರಾತ್ರಿ ಘಟನೆ ನಡೆದಿದ್ದು, ಮೊದಲಿಗೆ ಅಕ್ಷರ ದಾಸೋಹ ಕೊಠಡಿಗೆ ನುಗ್ಗಿ ಅಲ್ಲಿಂದ ಗ್ಯಾಸ್ ಹಂಡೆ ಹಾಗೂ ಸುಮಾರು 8 ಸಾವಿರ ರೂ ಮೌಲ್ಯದ ಹೊಸ ಮಿಕ್ಸಿಯನ್ನು ಕದ್ದಿದ್ದಾರೆ. ಬಳಿಕ ಅಲ್ಲಿಯೇ ಇದ್ದ ಪಿಕ್ಕಾಸಿನಿಂದ ಮುಖ್ಯಶಿಕ್ಷಕರ ಕಚೇರಿಯನ್ನು ಒಡೆದು ಬಳಿಕ ಅಲ್ಲಿದ್ದ ಕಪಾಟನ್ನು ಜಾಲಾಡಿದ್ದಾರೆ. ಬಳಿಕ ತರಗತಿಗಳಲ್ಲಿಯೂ ಹುಡುಕಾಟ ನಡೆಸಿದ್ದಾರೆ. ಬೆಳಗ್ಗೆ ಶಾಲಾ ಮಕ್ಕಳು ಬೀಗ ತೆರೆಯಲು ಬಂದ ವೇಳೆ ಘಟನೆ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.


ಘಟನೆ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಉಪ್ಪಿನಂಗಡಿ‌ ಠಾಣೆಯ ಎಸ್ಐ ಅವಿನಾಶ್ ಅವರು ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.


ಪಿಲಿಗೂಡು ಪರಿಸರದಲ್ಲಿ ಸಣ್ಣಪುಟ್ಟ ಕಳ್ಳತನ ನಡೆದಿದ್ದು, ದೂರು ನೀಡುವ ಹಂತಕ್ಕೆ ತಲುಪಿರಲಿಲ್ಲ. ಇದೀಗ ವಿದ್ಯಾ ದೇಗುಲವಾದ ಶಾಲೆಗೆ ಖದೀಮರು ಎಂಟ್ರಿ ಕೊಟ್ಟಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ‌. ಪಿಲಿಗೂಡು ಮೂಲಕ ಬಳ್ಳಮಂಜ, ಕಕ್ಯಪದವು ಅದೇರೀತಿ ಪದ್ಮುಂಜ, ಬಂದಾರು, ನೆಕ್ಕಿಲು, ಕುಪ್ಪೆಟ್ಟಿ ಮೊದಲಾದ ಕಡೆ ಸಂಪರ್ಕಿಸುವ ರಸ್ತೆ ಇದ್ದು ಅಕ್ರಮ ಕೆಲಸ ಎಸಗುವವರಿಗೆ ಉತ್ತಮ ತಾಣ ಎಂಬಂತಾಗಿದೆ ಪೊಲೀಸರು ಈ ಭಾಗದಲ್ಲಿಯೂ ಗಸ್ತು ಹೆಚ್ಚಿಸಬೇಕು ಎಂಬ ಮಾತುಗಳೂ ಕೇಳಿ ಬರುತ್ತಿವೆ. ಶಾಲೆಯ ಸಮೀಪದಲ್ಲೇ ಉದ್ಯಮಿಯೊಬ್ಬರ ಮನೆ ಇದ್ದು, ಮುಂದೆ ಇಂತಹ ಅಹಿತಕರ ಘಟನೆ ನಡೆಯದಿರಲಿ, ಕಳ್ಳರನ್ನು ಬೇಗನೇ ಪತ್ತೆ ಹಚ್ಚಿ ಶಿಕ್ಷಿಸಲಿ ಎನ್ನುವುದು ಸಾರ್ವಜನಿಕರ ಆಶಯವಾಗಿದೆ.

Related posts

ಬಾಸ್ಕೆಟ್‌ಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜು ಪುರುಷ ಮತ್ತು ಮಹಿಳೆಯರ ವಿಭಾಗಕ್ಕೆ ಪ್ರಶಸ್ತಿ

Suddi Udaya

ಶ್ರೀ ದೈವ ಕೊಡಮಣಿತ್ತಾಯ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತುಶ್ರೀ ಬ್ರಹ್ಮ ಬೈದರ್ಕಳ ಗರಡಿ ಪೊಸರಡ್ಕ- ಬ್ರಹ್ಮಕುಂಭಾಭಿಷೇಕ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಮೇ 9 ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ

Suddi Udaya

ಶ್ರಿ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ

Suddi Udaya

ಮರೋಡಿ: ಅಬುಸ್ವಾಲಿಹ್ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!