28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಕ್ಷರ ಕಲಿಸುವ ವಿದ್ಯಾ ದೇಗುಲಕ್ಕೆ ಖದೀಮರ ಕನ್ನ, ಕಣಿಯೂರಿನ ಪಿಲಿಗೂಡು ಶಾಲೆ ಬೀಗ ಒಡೆದು‌ ಕಳ್ಳತನ:

ಪಿಲಿಗೂಡು: ಕಣಿಯೂರು ಗ್ರಾಮದ ಪಿಲಿಗೂಡಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳ್ಳತನ ನಡೆದಿದ್ದು, ಖದೀಮರು ಶಾಲೆಯ ಬೀಗ ಒಡೆದು ಮಿಕ್ಸಿ, ಗ್ಯಾಸ್ ಹಂಡೆ ದೋಚಿದ್ದಾರೆ.


ಜೂ5 ರಂದು ರಾತ್ರಿ ಘಟನೆ ನಡೆದಿದ್ದು, ಮೊದಲಿಗೆ ಅಕ್ಷರ ದಾಸೋಹ ಕೊಠಡಿಗೆ ನುಗ್ಗಿ ಅಲ್ಲಿಂದ ಗ್ಯಾಸ್ ಹಂಡೆ ಹಾಗೂ ಸುಮಾರು 8 ಸಾವಿರ ರೂ ಮೌಲ್ಯದ ಹೊಸ ಮಿಕ್ಸಿಯನ್ನು ಕದ್ದಿದ್ದಾರೆ. ಬಳಿಕ ಅಲ್ಲಿಯೇ ಇದ್ದ ಪಿಕ್ಕಾಸಿನಿಂದ ಮುಖ್ಯಶಿಕ್ಷಕರ ಕಚೇರಿಯನ್ನು ಒಡೆದು ಬಳಿಕ ಅಲ್ಲಿದ್ದ ಕಪಾಟನ್ನು ಜಾಲಾಡಿದ್ದಾರೆ. ಬಳಿಕ ತರಗತಿಗಳಲ್ಲಿಯೂ ಹುಡುಕಾಟ ನಡೆಸಿದ್ದಾರೆ. ಬೆಳಗ್ಗೆ ಶಾಲಾ ಮಕ್ಕಳು ಬೀಗ ತೆರೆಯಲು ಬಂದ ವೇಳೆ ಘಟನೆ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.


ಘಟನೆ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಉಪ್ಪಿನಂಗಡಿ‌ ಠಾಣೆಯ ಎಸ್ಐ ಅವಿನಾಶ್ ಅವರು ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.


ಪಿಲಿಗೂಡು ಪರಿಸರದಲ್ಲಿ ಸಣ್ಣಪುಟ್ಟ ಕಳ್ಳತನ ನಡೆದಿದ್ದು, ದೂರು ನೀಡುವ ಹಂತಕ್ಕೆ ತಲುಪಿರಲಿಲ್ಲ. ಇದೀಗ ವಿದ್ಯಾ ದೇಗುಲವಾದ ಶಾಲೆಗೆ ಖದೀಮರು ಎಂಟ್ರಿ ಕೊಟ್ಟಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ‌. ಪಿಲಿಗೂಡು ಮೂಲಕ ಬಳ್ಳಮಂಜ, ಕಕ್ಯಪದವು ಅದೇರೀತಿ ಪದ್ಮುಂಜ, ಬಂದಾರು, ನೆಕ್ಕಿಲು, ಕುಪ್ಪೆಟ್ಟಿ ಮೊದಲಾದ ಕಡೆ ಸಂಪರ್ಕಿಸುವ ರಸ್ತೆ ಇದ್ದು ಅಕ್ರಮ ಕೆಲಸ ಎಸಗುವವರಿಗೆ ಉತ್ತಮ ತಾಣ ಎಂಬಂತಾಗಿದೆ ಪೊಲೀಸರು ಈ ಭಾಗದಲ್ಲಿಯೂ ಗಸ್ತು ಹೆಚ್ಚಿಸಬೇಕು ಎಂಬ ಮಾತುಗಳೂ ಕೇಳಿ ಬರುತ್ತಿವೆ. ಶಾಲೆಯ ಸಮೀಪದಲ್ಲೇ ಉದ್ಯಮಿಯೊಬ್ಬರ ಮನೆ ಇದ್ದು, ಮುಂದೆ ಇಂತಹ ಅಹಿತಕರ ಘಟನೆ ನಡೆಯದಿರಲಿ, ಕಳ್ಳರನ್ನು ಬೇಗನೇ ಪತ್ತೆ ಹಚ್ಚಿ ಶಿಕ್ಷಿಸಲಿ ಎನ್ನುವುದು ಸಾರ್ವಜನಿಕರ ಆಶಯವಾಗಿದೆ.

Related posts

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಆಕರ್ಷಕ ಗಿಫ್ಟ್ ಗಳು

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಬೆಳ್ತಂಗಡಿ ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಅನಿಲ್ ಎ.ಜೆ, ಉಪಾಧ್ಯಕ್ಷರಾಗಿ ಜಾರ್ಜ್ ಎಮ್.ವಿ. ಆಯ್ಕೆ

Suddi Udaya

ಬೆಳ್ತಂಗಡಿ: ಅಂಬ್ಯೂಲೆನ್ಸ್ ಚಾಲಕನ ಮೇಲೆ ಹಲ್ಲೆ

Suddi Udaya
error: Content is protected !!