27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಕ್ಷರ ಕಲಿಸುವ ವಿದ್ಯಾ ದೇಗುಲಕ್ಕೆ ಖದೀಮರ ಕನ್ನ, ಕಣಿಯೂರಿನ ಪಿಲಿಗೂಡು ಶಾಲೆ ಬೀಗ ಒಡೆದು‌ ಕಳ್ಳತನ:

ಪಿಲಿಗೂಡು: ಕಣಿಯೂರು ಗ್ರಾಮದ ಪಿಲಿಗೂಡಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳ್ಳತನ ನಡೆದಿದ್ದು, ಖದೀಮರು ಶಾಲೆಯ ಬೀಗ ಒಡೆದು ಮಿಕ್ಸಿ, ಗ್ಯಾಸ್ ಹಂಡೆ ದೋಚಿದ್ದಾರೆ.


ಜೂ5 ರಂದು ರಾತ್ರಿ ಘಟನೆ ನಡೆದಿದ್ದು, ಮೊದಲಿಗೆ ಅಕ್ಷರ ದಾಸೋಹ ಕೊಠಡಿಗೆ ನುಗ್ಗಿ ಅಲ್ಲಿಂದ ಗ್ಯಾಸ್ ಹಂಡೆ ಹಾಗೂ ಸುಮಾರು 8 ಸಾವಿರ ರೂ ಮೌಲ್ಯದ ಹೊಸ ಮಿಕ್ಸಿಯನ್ನು ಕದ್ದಿದ್ದಾರೆ. ಬಳಿಕ ಅಲ್ಲಿಯೇ ಇದ್ದ ಪಿಕ್ಕಾಸಿನಿಂದ ಮುಖ್ಯಶಿಕ್ಷಕರ ಕಚೇರಿಯನ್ನು ಒಡೆದು ಬಳಿಕ ಅಲ್ಲಿದ್ದ ಕಪಾಟನ್ನು ಜಾಲಾಡಿದ್ದಾರೆ. ಬಳಿಕ ತರಗತಿಗಳಲ್ಲಿಯೂ ಹುಡುಕಾಟ ನಡೆಸಿದ್ದಾರೆ. ಬೆಳಗ್ಗೆ ಶಾಲಾ ಮಕ್ಕಳು ಬೀಗ ತೆರೆಯಲು ಬಂದ ವೇಳೆ ಘಟನೆ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.


ಘಟನೆ ಬಳಿಕ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಉಪ್ಪಿನಂಗಡಿ‌ ಠಾಣೆಯ ಎಸ್ಐ ಅವಿನಾಶ್ ಅವರು ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.


ಪಿಲಿಗೂಡು ಪರಿಸರದಲ್ಲಿ ಸಣ್ಣಪುಟ್ಟ ಕಳ್ಳತನ ನಡೆದಿದ್ದು, ದೂರು ನೀಡುವ ಹಂತಕ್ಕೆ ತಲುಪಿರಲಿಲ್ಲ. ಇದೀಗ ವಿದ್ಯಾ ದೇಗುಲವಾದ ಶಾಲೆಗೆ ಖದೀಮರು ಎಂಟ್ರಿ ಕೊಟ್ಟಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ‌. ಪಿಲಿಗೂಡು ಮೂಲಕ ಬಳ್ಳಮಂಜ, ಕಕ್ಯಪದವು ಅದೇರೀತಿ ಪದ್ಮುಂಜ, ಬಂದಾರು, ನೆಕ್ಕಿಲು, ಕುಪ್ಪೆಟ್ಟಿ ಮೊದಲಾದ ಕಡೆ ಸಂಪರ್ಕಿಸುವ ರಸ್ತೆ ಇದ್ದು ಅಕ್ರಮ ಕೆಲಸ ಎಸಗುವವರಿಗೆ ಉತ್ತಮ ತಾಣ ಎಂಬಂತಾಗಿದೆ ಪೊಲೀಸರು ಈ ಭಾಗದಲ್ಲಿಯೂ ಗಸ್ತು ಹೆಚ್ಚಿಸಬೇಕು ಎಂಬ ಮಾತುಗಳೂ ಕೇಳಿ ಬರುತ್ತಿವೆ. ಶಾಲೆಯ ಸಮೀಪದಲ್ಲೇ ಉದ್ಯಮಿಯೊಬ್ಬರ ಮನೆ ಇದ್ದು, ಮುಂದೆ ಇಂತಹ ಅಹಿತಕರ ಘಟನೆ ನಡೆಯದಿರಲಿ, ಕಳ್ಳರನ್ನು ಬೇಗನೇ ಪತ್ತೆ ಹಚ್ಚಿ ಶಿಕ್ಷಿಸಲಿ ಎನ್ನುವುದು ಸಾರ್ವಜನಿಕರ ಆಶಯವಾಗಿದೆ.

Related posts

ಉಜಿರೆ ಶ್ರೀ ಧ.ಮಂ. ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟದ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಕಲಾ ಕೇಂದ್ರದಲ್ಲಿ ಯಕ್ಷಗಾನದ ನೂತನ ರಂಗಸ್ಥಳದ ಚೌಕಟ್ಟು ಉದ್ಘಾಟನೆ

Suddi Udaya

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

Suddi Udaya

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ : ಸಿಬಿಐ ಮೇಲ್ಮನವಿ

Suddi Udaya

ಪ್ರತಿಭಾ ಕಾರಂಜಿ: ಸ್ಟಾರ್‌ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ

Suddi Udaya

ಮಚ್ಚಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!