23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಚಿತ ಬಿದಿರು ಸಸಿಗಳ ವಿತರಣೆ; ಅರ್ಜಿ ಆಹ್ವಾನ

ಬೆಳ್ತಂಗಡಿ: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಂಗಳೂರು ಇವರು ಸಿಎಸ್ಆರ್ ನಿಧಿಯಲ್ಲಿ ಬಿದಿರು ಬೆಳೆಸುವ ಯೋಜನೆ ಹಾಕಿಕೊಂಡಿದ್ದು, ಪ್ರಾರಂಭಿಕ ಹಂತದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 25 ಸಾವಿರ ಬಿದಿರು ಸಸಿಗಳನ್ನು ಉಚಿತವಾಗಿ ರೈತರಿಗೆ ವಿತರಿಸಲಿದ್ದಾರೆ.

ಈ ಯೋಜನೆಯು ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಂಗಳೂರು ಹಾಗೂ ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ (ನಿ.) ಉಜಿರೆ ಇವರು ಜಂಟಿಯಾಗಿ ಅನುಷ್ಠಾನ ಮಾಡುವ ಯೋಜನೆಯಾಗಿದ್ದು ಬಿದಿರು ಕೃಷಿಯಲ್ಲಿ ಆಸಕ್ತ ಕೃಷಿಕರು ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಮುಖ್ಯ ಕಚೇರಿ, ಉಜಿರೆಯಲ್ಲಿ ಈ ಬಗ್ಗೆ ಅವಶ್ಯಕ ಅರ್ಜಿಯನ್ನು ಜೂ.20 ರ ಮೊದಲು ಸಲ್ಲಿಸಬೇಕಾಗಿರುತ್ತದೆ.

ಈ ಯೋಜನೆಯಲ್ಲಿ ಕನಿಷ್ಟ 50 ಗಿಡ ಹಾಗೂ ಗರಿಷ್ಟ 600 ಗಿಡಗಳನ್ನು ಉಚಿತವಾಗಿ ನೀಡಲಾಗುವುದು. ಉಚಿತ ವಿತರಿಸಿದ ಬಿದಿರು ಗಿಡಗಳನ್ನು ಕಡ್ಡಾಯವಾಗಿ ನಾಟಿಮಾಡಬೇಕು ಹಾಗೂ ಬಿದಿರು ಸೊಸೈಟಿ ಆಫ್ ಇಂಡಿಯಾ ಇಲ್ಲಿನ ಪ್ರತಿನಿಧಿಗೆ ಗಿಡದ ಬೆಳವಣಿಗೆ ಬಗ್ಗೆ ಮಾಹಿತಿ ನೀಡುವುದು ಕಡ್ಡಾಯವಾಗಿರುತ್ತದೆ. ಮುಂದಿನ ಎರಡು ವರ್ಷ ಉತ್ತಮವಾಗಿ ಬೆಳೆಸಿದ ಸಸಿಗಳಿಗೆ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿ ನೀಡಲು ಇಚ್ಚಿಸುವ ರೈತರು ತಮ್ಮ ಸ್ವವಿವರದೊಂದಿಗೆ ಬಿದಿರು ಕೃಷಿ ಮಾಡಲಿಚ್ಚಿಸುವ ಜಾಗದ ವಿವರ ಮತ್ತು ಆಧಾರ್ ಪ್ರತಿಯೊಂದಿಗೆ ಕಚೇರಿ ಸಮಯದಲ್ಲಿ ಸಂಘವನ್ನು ಸಂಪರ್ಕಿಸಬೇಕಾಗಿ ತಿಳಿಸಿದೆ.

Related posts

ಬಂದಾರುವಿನಲ್ಲಿ ಸರಿಯಾಗಿ ಬಸ್ಸು ವ್ಯವಸ್ಥೆಯಿಲ್ಲದೆ ಪ್ರಯಾಣಿಕರ ಪರದಾಟ: ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಸ್ಥಳೀಯರ ಮನವಿ

Suddi Udaya

ಬೆಳ್ತಂಗಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ವಿಚಾರ ಸಂಕಿರಣ ಕಾರ್ಯಕ್ರಮ

Suddi Udaya

ಲಾಯಿಲ: ಗಂಗಮ್ಮ ಪೂಜಾರಿ ನಿಧನ

Suddi Udaya

ಜು.9: ಸೋಮಂತಡ್ಕ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 22 ನೇ ಶಾಖೆ ಉದ್ಘಾಟನೆ

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ: ಅ.15 ಬ್ರಹ್ಮಕಲಶೋತ್ಸವ ಸಮಿತಿ ರಚನೆಗೆ ಭಕ್ತಾದಿಗಳ ಸಮಾಲೋಚನಾ ಸಭೆ

Suddi Udaya

ಬಂಟರ ಮಹಿಳಾ ವಿಭಾಗದಿಂದ “ಸ್ಪರ್ಶ” ಹೆಣ್ಣು ಮಕ್ಕಳ ಜಾಗೃತಿ ವಿಶೇಷ ಕಾರ್ಯಕ್ರಮ

Suddi Udaya
error: Content is protected !!