July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಚಿತ ಬಿದಿರು ಸಸಿಗಳ ವಿತರಣೆ; ಅರ್ಜಿ ಆಹ್ವಾನ

ಬೆಳ್ತಂಗಡಿ: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಂಗಳೂರು ಇವರು ಸಿಎಸ್ಆರ್ ನಿಧಿಯಲ್ಲಿ ಬಿದಿರು ಬೆಳೆಸುವ ಯೋಜನೆ ಹಾಕಿಕೊಂಡಿದ್ದು, ಪ್ರಾರಂಭಿಕ ಹಂತದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 25 ಸಾವಿರ ಬಿದಿರು ಸಸಿಗಳನ್ನು ಉಚಿತವಾಗಿ ರೈತರಿಗೆ ವಿತರಿಸಲಿದ್ದಾರೆ.

ಈ ಯೋಜನೆಯು ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಂಗಳೂರು ಹಾಗೂ ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ (ನಿ.) ಉಜಿರೆ ಇವರು ಜಂಟಿಯಾಗಿ ಅನುಷ್ಠಾನ ಮಾಡುವ ಯೋಜನೆಯಾಗಿದ್ದು ಬಿದಿರು ಕೃಷಿಯಲ್ಲಿ ಆಸಕ್ತ ಕೃಷಿಕರು ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಮುಖ್ಯ ಕಚೇರಿ, ಉಜಿರೆಯಲ್ಲಿ ಈ ಬಗ್ಗೆ ಅವಶ್ಯಕ ಅರ್ಜಿಯನ್ನು ಜೂ.20 ರ ಮೊದಲು ಸಲ್ಲಿಸಬೇಕಾಗಿರುತ್ತದೆ.

ಈ ಯೋಜನೆಯಲ್ಲಿ ಕನಿಷ್ಟ 50 ಗಿಡ ಹಾಗೂ ಗರಿಷ್ಟ 600 ಗಿಡಗಳನ್ನು ಉಚಿತವಾಗಿ ನೀಡಲಾಗುವುದು. ಉಚಿತ ವಿತರಿಸಿದ ಬಿದಿರು ಗಿಡಗಳನ್ನು ಕಡ್ಡಾಯವಾಗಿ ನಾಟಿಮಾಡಬೇಕು ಹಾಗೂ ಬಿದಿರು ಸೊಸೈಟಿ ಆಫ್ ಇಂಡಿಯಾ ಇಲ್ಲಿನ ಪ್ರತಿನಿಧಿಗೆ ಗಿಡದ ಬೆಳವಣಿಗೆ ಬಗ್ಗೆ ಮಾಹಿತಿ ನೀಡುವುದು ಕಡ್ಡಾಯವಾಗಿರುತ್ತದೆ. ಮುಂದಿನ ಎರಡು ವರ್ಷ ಉತ್ತಮವಾಗಿ ಬೆಳೆಸಿದ ಸಸಿಗಳಿಗೆ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿ ನೀಡಲು ಇಚ್ಚಿಸುವ ರೈತರು ತಮ್ಮ ಸ್ವವಿವರದೊಂದಿಗೆ ಬಿದಿರು ಕೃಷಿ ಮಾಡಲಿಚ್ಚಿಸುವ ಜಾಗದ ವಿವರ ಮತ್ತು ಆಧಾರ್ ಪ್ರತಿಯೊಂದಿಗೆ ಕಚೇರಿ ಸಮಯದಲ್ಲಿ ಸಂಘವನ್ನು ಸಂಪರ್ಕಿಸಬೇಕಾಗಿ ತಿಳಿಸಿದೆ.

Related posts

ಜ.25: ಕುವೆಟ್ಟು ಮಹಮ್ಮಾಯಿ ದೇವಿಯ ಮಾರಿಪೂಜೆ ಹಾಗೂ ಗುಳಿಗ ದೈವಕ್ಕೆ ನೇಮೋತ್ಸವ

Suddi Udaya

ಆಶುಭಾಷಣ ಸ್ಪರ್ಧೆ: ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜು ವಿದ್ಯಾರ್ಥಿನಿ ಕು.ಸುಮೇಧಾ ಗಾoವ್ಕರ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ‘ಉತ್ತಮ ಆಹಾರ ಅಭ್ಯಾಸ ಮತ್ತು ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಮಾಹಿತಿ ಕಾರ್ಯಕ್ರಮ

Suddi Udaya

ಸಾರ್ವಜನಿಕ ಸ್ಥಳಗಳಲ್ಲಿ ಮಚ್ಚು ತೋರಿಸಿ ಬೆದರಿಕೆಯೊಡ್ಡಿದ ಆರೋಪ, ಆನಂದ ಆಚಾರ್ಯ ಎಂಬಾತನ ವಿರುದ್ದ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮಾಹಿತಿ ಮತ್ತು ಆಪ್ತ ಸಮಾಲೋಚನಾ ಕಾರ್ಯಾಗಾರ

Suddi Udaya

ಎ.14: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ನಾಮಪತ್ರ ಸಲ್ಲಿಕೆ

Suddi Udaya
error: Content is protected !!