September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಚಿತ ಬಿದಿರು ಸಸಿಗಳ ವಿತರಣೆ; ಅರ್ಜಿ ಆಹ್ವಾನ

ಬೆಳ್ತಂಗಡಿ: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಂಗಳೂರು ಇವರು ಸಿಎಸ್ಆರ್ ನಿಧಿಯಲ್ಲಿ ಬಿದಿರು ಬೆಳೆಸುವ ಯೋಜನೆ ಹಾಕಿಕೊಂಡಿದ್ದು, ಪ್ರಾರಂಭಿಕ ಹಂತದಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ 25 ಸಾವಿರ ಬಿದಿರು ಸಸಿಗಳನ್ನು ಉಚಿತವಾಗಿ ರೈತರಿಗೆ ವಿತರಿಸಲಿದ್ದಾರೆ.

ಈ ಯೋಜನೆಯು ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಂಗಳೂರು ಹಾಗೂ ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ (ನಿ.) ಉಜಿರೆ ಇವರು ಜಂಟಿಯಾಗಿ ಅನುಷ್ಠಾನ ಮಾಡುವ ಯೋಜನೆಯಾಗಿದ್ದು ಬಿದಿರು ಕೃಷಿಯಲ್ಲಿ ಆಸಕ್ತ ಕೃಷಿಕರು ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಮುಖ್ಯ ಕಚೇರಿ, ಉಜಿರೆಯಲ್ಲಿ ಈ ಬಗ್ಗೆ ಅವಶ್ಯಕ ಅರ್ಜಿಯನ್ನು ಜೂ.20 ರ ಮೊದಲು ಸಲ್ಲಿಸಬೇಕಾಗಿರುತ್ತದೆ.

ಈ ಯೋಜನೆಯಲ್ಲಿ ಕನಿಷ್ಟ 50 ಗಿಡ ಹಾಗೂ ಗರಿಷ್ಟ 600 ಗಿಡಗಳನ್ನು ಉಚಿತವಾಗಿ ನೀಡಲಾಗುವುದು. ಉಚಿತ ವಿತರಿಸಿದ ಬಿದಿರು ಗಿಡಗಳನ್ನು ಕಡ್ಡಾಯವಾಗಿ ನಾಟಿಮಾಡಬೇಕು ಹಾಗೂ ಬಿದಿರು ಸೊಸೈಟಿ ಆಫ್ ಇಂಡಿಯಾ ಇಲ್ಲಿನ ಪ್ರತಿನಿಧಿಗೆ ಗಿಡದ ಬೆಳವಣಿಗೆ ಬಗ್ಗೆ ಮಾಹಿತಿ ನೀಡುವುದು ಕಡ್ಡಾಯವಾಗಿರುತ್ತದೆ. ಮುಂದಿನ ಎರಡು ವರ್ಷ ಉತ್ತಮವಾಗಿ ಬೆಳೆಸಿದ ಸಸಿಗಳಿಗೆ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿ ನೀಡಲು ಇಚ್ಚಿಸುವ ರೈತರು ತಮ್ಮ ಸ್ವವಿವರದೊಂದಿಗೆ ಬಿದಿರು ಕೃಷಿ ಮಾಡಲಿಚ್ಚಿಸುವ ಜಾಗದ ವಿವರ ಮತ್ತು ಆಧಾರ್ ಪ್ರತಿಯೊಂದಿಗೆ ಕಚೇರಿ ಸಮಯದಲ್ಲಿ ಸಂಘವನ್ನು ಸಂಪರ್ಕಿಸಬೇಕಾಗಿ ತಿಳಿಸಿದೆ.

Related posts

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ: ವರದಿ ಸಾಲಿನಲ್ಲಿ 4,13,15,569 ವ್ಯವಹಾರ,13,49,980 ನಿವ್ವಳ ಲಾಭ. ಸದಸ್ಯರಿಗೆ 65% ಬೋನಸ್ ಹಾಗೂ 25% ಡಿವಿಡೆಂಡ್ ಘೋಷಣೆ: ದ್ವೀತಿಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಶಕ್ತಿ ವಂದನಾ ಕಾರ್ಯಕ್ರಮ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗುಂತೆ ಧರ್ಮಸ್ಥಳದ ಗ್ರಾಮಸ್ಥರು, ವರ್ತಕರು, ನೌಕರ ವೃಂದದವರಿಂದ ವಿಶೇಷ ಪ್ರಾರ್ಥನೆ

Suddi Udaya

ರೂ.23 ಕೋಟಿ ವೆಚ್ಚದಲ್ಲಿ ನಿಮಾ೯ಣವಾಗಲಿರುವ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಶಿಲಾನ್ಯಾಸ

Suddi Udaya
error: Content is protected !!