25.3 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಬಿಜೆಪಿ ಮುಖಂಡನ ಮೇಲಿನ ಹಲ್ಲೆ ಕುರಿತು ಬಿಜೆಪಿ ಮಂಡಲ ವತಿಯಿಂದ ಪತ್ರಿಕಾಗೋಷ್ಠಿ

ಬೆಳ್ತಂಗಡಿ : ಬೆಳ್ತಂಗಡಿ ಅನೇಕ ನಾಯಕರುಗಳು ಶಾಸಕರಾಗಿ ಹೋದ ಕ್ಷೇತ್ರ ಆದರೆ ದ್ವೇಷ ರಾಜಕೀಯ ಇರಲಿಲ್ಲ. ವಸಂತ ಬಂಗೇರರು ಇರುವಾಗ ಈ ರೀತಿ ನಡೆದಿಲ್ಲ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಹೇಳಿದರು.

ಅವರು ಜೂ.6ರಂದು ಗುರುವಾಯನಕೆರೆ ನವಶಕ್ತಿ ಹೋಟೆಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಕಳೆಂಜದಲ್ಲಿ ಎಸ್ ಟಿ ಮುಖಂಡ ರಾಜೇಶ್ ನ ಮೇಲಿನ ಹಲ್ಲೆಯ ಹಿಂದೆ ಕೊಲೆಯ ಪ್ರಯತ್ನ ನಡೆದಿದೆ ಎಂಬುವುದು ಸ್ಪಷ್ಟ. ಜಾತಿ ನಿಂದನೆಯನ್ನು ಕುಶಾಲಪ್ಪ ಗೌಡ ರವರು ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸನ್ನು ಹಾಕುವುದರ ಮೂಲಕ ಸುಳ್ಳಿನ ಕಂತೆಗಳ ಸುರಿಮಳೆ ಇವತ್ತು ಆಗುತ್ತಿದೆ. ಪರಿಶಿಷ್ಟ ಪಂಗಡದ ವ್ಯಕ್ತಿಗೆ ಈ ರೀತಿ ಮಾಡ್ತಾರೆ ಎಂದಾದರೆ ಇನ್ನೂ ಸಾಮಾನ್ಯ ಜನರ ಕಥೆ ಏನು?, ಈ ರೀತಿಯ ಕೀಳು ಮಟ್ಟದ ರಾಜಕೀಯವನ್ನು ನಾನು ನೋಡಿಲ್ಲ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ ಕೋಟ್ಯಾನ್, ರಾಜ್ಯ ಸಮಿತಿ ಸದಸ್ಯ ಕೊರಗಪ್ಪ ನಾಯ್ಕ, ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ ಉಪಸ್ಥಿತರಿದ್ದರು.

Related posts

ಫೆ.15-22: ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ದೈವಗಳ ಪ್ರತಿಷ್ಠೆ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ, ದೇವಗಳ ನೇಮೋತ್ಸವ

Suddi Udaya

ಹಿರಿಯ ಸಹಕಾರಿ ಧುರೀಣ ಮಾಜಿ ಜಿ.ಪಂ. ಉಪಾಧ್ಯಕ್ಷ ನಿರಂಜನ ಬಾವಂತಬೆಟ್ಟು ನಿಧನ

Suddi Udaya

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

Suddi Udaya

ಎಸ್ ಡಿ ಎಮ್ ವಸತಿ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಂದ ಡ್ರಾಗನ್ ತೋಟಕ್ಕೆ ಶಿಕ್ಷಣ ಪ್ರವಾಸ

Suddi Udaya

ಕನಾ೯ಟಕ ಯಕ್ಷಗಾನ ಅಕಾಡೆಮಿ ನೂತನ ಸದಸ್ಯರ ನೇಮಕ

Suddi Udaya

ಕನ್ನಡ ರಾಜ್ಯೋತ್ಸವದ ಅಂಗವಾಗಿ ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಡಿಪ್ಪೊದಲ್ಲಿ ಉಚಿತ ರಕ್ತದೊತ್ತಡ , ಮಧುಮೇಹ ಪರೀಕ್ಷೆ

Suddi Udaya
error: Content is protected !!