25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಪ್ರತಿ ವರ್ಷದಂತೆ ಟ್ರಸ್ಟ್ ಕಚೇರಿಯಲ್ಲಿ ಜೂನ್ 5ರಂದು ಆಚರಿಸಲಾಯಿತು.

ದ.ಕ. ಪರಿಸರಾಸ್ತಕರ ಒಕ್ಕೂಟದ ಮಾಜಿ ಅಧ್ಯಕ್ಷ, ನಾಟಿ ವೈದ್ಯ ಐ. ಕುಶಾಲಪ್ಪ ಗೌಡ ಗಿಡಮೂಲಿಕೆಗಳ ಔಷಧೀಯ ಗುಣಗಳ ಕುರಿತು ಮಾಹಿತಿ ನೀಡಿ, ಮನೆಗೆ ಬೇಕಾದ ತರಕಾರಿಯನ್ನು ಮನೆಯ ಸುತ್ತ ಕಡಿಮೆ ಸ್ಥಳದಲ್ಲಿ ಬೆಳೆಸುವ ಸರಳ ವಿಧಾನ ವಿವರಿಸಿದರು.

ಟ್ರಸ್ಟ್‌ನ ಉಪಾಧ್ಯಕ್ಷೆ, ಕರಾವಳಿ ಮಹಿಳಾ ಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷೆ ವಿದ್ಯಾ ನಾಯಕ್ ವಿಶ್ವ ಪರಿಸರ ದಿನಾಚರಣೆಯ ಈ ವರ್ಷದ ಥೀಮ್ ಭೂಮಿ ಪುನಃ ಸ್ಥಾಪನೆ, ಮರುಭೂಮಿ ಮತ್ತು ಬರ ಸ್ಥಿತಿ ಸ್ಥಾಪಕತ್ವ ಇದರ ಬಗ್ಗೆ ಮಾತನಾಡಿದರು.

ಟ್ರಸ್ಟ್‌ನ ಅಧ್ಯಕ್ಷ ಕೆ. ಸೋಮನಾಥ ನಾಯಕ್ ಸಭಾಧ್ಯಕ್ಷತೆ ವಹಿಸಿದ್ದರು.

ಟ್ರಸ್ಟಿ ಸದಾಶಿವ ಹೆಗ್ಡೆ ಸ್ವಾಗತಿಸಿದರು. ದಲಿತ ಮುಖಂಡ ಎಂ.ಬಿ. ಕರಿಯ ವಂದಿಸಿದರು. ಟ್ರಸ್ಟ್ ಮೆನೇಜರ್ ಬಾಬು ಎ. ಕಾರ್ಯಕ್ರಮ ನಿರೂಪಿಸಿದರು.

Related posts

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ಸಾಂಪ್ರದಾಯಿಕ ದಿನಾಚರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಬಿಸಿಎ ವಿಭಾಗದಿಂದ ಎನಿಗ್ಮಾ-2024

Suddi Udaya

ವೇಣೂರು: ಕುಂಭಶ್ರೀ ಶಾಲೆಯ ಬಳಿ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ರಿಕ್ಷಾ ಚಾಲಕನಿಗೆ ಗಾಯ

Suddi Udaya

ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya
error: Content is protected !!