May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಪ್ರತಿ ವರ್ಷದಂತೆ ಟ್ರಸ್ಟ್ ಕಚೇರಿಯಲ್ಲಿ ಜೂನ್ 5ರಂದು ಆಚರಿಸಲಾಯಿತು.

ದ.ಕ. ಪರಿಸರಾಸ್ತಕರ ಒಕ್ಕೂಟದ ಮಾಜಿ ಅಧ್ಯಕ್ಷ, ನಾಟಿ ವೈದ್ಯ ಐ. ಕುಶಾಲಪ್ಪ ಗೌಡ ಗಿಡಮೂಲಿಕೆಗಳ ಔಷಧೀಯ ಗುಣಗಳ ಕುರಿತು ಮಾಹಿತಿ ನೀಡಿ, ಮನೆಗೆ ಬೇಕಾದ ತರಕಾರಿಯನ್ನು ಮನೆಯ ಸುತ್ತ ಕಡಿಮೆ ಸ್ಥಳದಲ್ಲಿ ಬೆಳೆಸುವ ಸರಳ ವಿಧಾನ ವಿವರಿಸಿದರು.

ಟ್ರಸ್ಟ್‌ನ ಉಪಾಧ್ಯಕ್ಷೆ, ಕರಾವಳಿ ಮಹಿಳಾ ಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷೆ ವಿದ್ಯಾ ನಾಯಕ್ ವಿಶ್ವ ಪರಿಸರ ದಿನಾಚರಣೆಯ ಈ ವರ್ಷದ ಥೀಮ್ ಭೂಮಿ ಪುನಃ ಸ್ಥಾಪನೆ, ಮರುಭೂಮಿ ಮತ್ತು ಬರ ಸ್ಥಿತಿ ಸ್ಥಾಪಕತ್ವ ಇದರ ಬಗ್ಗೆ ಮಾತನಾಡಿದರು.

ಟ್ರಸ್ಟ್‌ನ ಅಧ್ಯಕ್ಷ ಕೆ. ಸೋಮನಾಥ ನಾಯಕ್ ಸಭಾಧ್ಯಕ್ಷತೆ ವಹಿಸಿದ್ದರು.

ಟ್ರಸ್ಟಿ ಸದಾಶಿವ ಹೆಗ್ಡೆ ಸ್ವಾಗತಿಸಿದರು. ದಲಿತ ಮುಖಂಡ ಎಂ.ಬಿ. ಕರಿಯ ವಂದಿಸಿದರು. ಟ್ರಸ್ಟ್ ಮೆನೇಜರ್ ಬಾಬು ಎ. ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ತಾಲೂಕು 19 ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಬಿ. ಭುಜಬಲಿ ಧರ್ಮಸ್ಥಳ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ : ಯಕ್ಷ ಶಿಕ್ಷಣ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

Suddi Udaya

ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷ ಪೃಥ್ವಿರಂಜನ್ ರಾವ್ ರವರಿಗೆ ನುಡಿ ನಮನ

Suddi Udaya

ಅರಸಿನಮಕ್ಕಿ ಶ್ರೀಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹಿಂಭಾಗದಲ್ಲಿ ಕ್ಷೇತ್ರದ ವತಿಯಿಂದ ರಸ್ತೆಗೆ ಅಳವಡಿಸಿದ ಗೇಟು ತೆರವು

Suddi Udaya

ನಾರಾವಿ: ಮರಕ್ಕೆ ಡಿಕ್ಕಿ ಹೊಡೆದ ಬೈಕ್ – ಇಬ್ಬರು ಸ್ಥಳದಲ್ಲಿಯೇ ಸಾವು

Suddi Udaya
error: Content is protected !!