28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಮುಖಂಡ ರಾಜೇಶ್ ಕೊಲೆ ಯತ್ನ ಪ್ರಕರಣ: ಆರೋಪಿ ಕುಶಾಲಪ್ಪ ಗೌಡ ಬಂಧನ

ಬೆಳ್ತಂಗಡಿ : ಬಿಜೆಪಿ ಬೆಳ್ತಂಗಡಿ ತಾಲೂಕು ಮಂಡಲದ ಎಸ್ ಟಿ ಮೋರ್ಚಾದ ಅಧ್ಯಕ್ಷ, ರಾಜೇಶ್ ಎಂ.ಕೆ(33) ಮೇಲೆ ಜೂ.4 ರಂದು ರಾತ್ರಿ ಕೊಲೆ ಯತ್ನ ನಡೆಸಿದ ಆರೋಪಿ ಕುಶಾಲಪ್ಪ ಗೌಡರವರನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಳೆಂಜ ಗ್ರಾಮದ ಕಾಯರ್ತಡ್ಕ ಕಾಂಗ್ರೆಸ್ ಮುಖಂಡ ಕಳೆಂಜ ನಿವಾಸಿ ಕುಶಾಲಪ್ಪ ಗೌಡ ಕಜೆ(48) ಎಂಬಾತನು ರಾಜೇಶ್ ಎಂ.ಕೆ ಮೇಲೆ ಕ್ಷುಲ್ಲಕ ಕಾರಣಕ್ಕೆ ಜಾತಿ ನಿಂದನೆ ಮಾಡಿ, ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ, ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.5 ರಂದು ಆರೋಪಿ ಕುಶಾಲಪ್ಪ ಗೌಡ ನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ಮಂಗಳೂರು ಸೆಷನ್ಸ್ ಕೋರ್ಟ್ ನ್ಯಾಯಧೀಶರ ಮನೆಗೆ ರಾತ್ರಿ ಹಾಜರುಪಡಿಸಿದ್ದು, ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಹಲ್ಲೆಗೊಳಾಗಾಗಿ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ರಾಜೇಶ್.ಎಂ.ಕೆ ನೀಡಿದ ದೂರಿನ ಮೇರೆಗೆ ಅಟ್ರಾಸಿಟಿ, ಕೊಲೆ ಯತ್ನ, ದರೋಡೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya

ಪುಂಜಲ್ ಕಟ್ಟೆ ಕ್ಲಸ್ಟರ್ ವತಿಯಿಂದ ರಘುಪತಿ ಕೆ ರಾವ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬಜಿರೆ : ಹೊಸಪಟ್ಣ ನಿವಾಸಿ ಶ್ರೀಧರ ಪೂಜಾರಿ ನಿಧನ

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ

Suddi Udaya

ಉಜಿರೆ: ಅಗಲಿದ ಸಹಕಾರಿ ಧುರೀಣ ಇಚ್ಚಿಲ ಸುಂದರ ಗೌಡರಿಗೆ ನುಡಿನಮನ

Suddi Udaya

ಮುಂಡಾಜೆ : ಅರೆಕ್ಕಲ್ ನಿವಾಸಿ ಹಿರಿಯ ಕೃಷಿಕ ಇಸ್ಮಾಯಿಲ್ ಹಾಜಿ ಮೂಲೆ ನಿಧನ

Suddi Udaya
error: Content is protected !!