May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುರ್ಯ ದೇವಸ್ಥಾನದ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆ

ನಡ: ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಸದಾಶಿವರುದ್ರ ದೇವಸ್ಥಾನದ ವಠಾರದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ಬೆಳ್ತಂಗಡಿ ವಲಯ ಹಾಗೂ ಸುರ್ಯ ದೇವಸ್ಥಾನದ ಆಶ್ರಯದಲ್ಲಿ “ವಿಶ್ವ ಪರಿಸರ ದಿನ ” ಆಚರಿಸಲಾಯಿತು.

ಸುರ್ಯ ದೇವಸ್ಥಾನದ ಆನುವಂಶಿಯ ಆಡಳಿತ ಮೊಕ್ತೇಸರ ಡಾ. ಸತೀಶ್ಚಂದ್ರ ಸುರ್ಯಗುತ್ತು ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಡಾ. ಸತೀಶ್ಚಂದ್ರ ಹಾಗೂ ವಿದ್ಯಾ. ಪಿ. ಡಿ. ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ (ಸಾಮಾಜಿಕ ಅರಣ್ಯ ಇಲಾಖೆ ) ಇವರು ಪರಿಸರ ಸಂರಕ್ಷಣೆ ಹಾಗೂ ಸಾಮಾಜಿಕ ಅರಣ್ಯಕರಣದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಅರಣ್ಯಧಿಕಾರಿ ಅಶೋಕ್, ಇಲಾಖೆ ಸಿಬ್ಬಂದಿ ಶೇಖರ ಗೌಡ, ನಡ ಪಂಚಾಯತ್ ಮಾಜಿ ಅಧ್ಯಕ್ಷ ಮುನಿರಾಜ ಅಜ್ರಿ, ಪ್ರಸಾದ್, ಸುಂದರ ನಾಯ್ಕ, ಪದ್ಮನಾಭ ಗೌಡ, ಯೋಗೀಶ್ ಪೂಜಾರಿ ಹಾಜರಿದ್ದರು. ಮಾವು, ಹೆಬ್ಬಲಸು, ಸಂಪಿಗೆ, ನೇರಳೆ, ಶ್ರೀಗಂಧ, ಸೊರಗೆ , ಹೊಳೆ ದಾಸವಾಳ ಇತ್ಯಾದಿ ವಿವಿಧ ಬಗೆಯ ನೂರು ಗಿಡಗಳನ್ನು ಸುರ್ಯ ದೇವಸ್ಥಾನದ ವಠಾರದಲ್ಲಿ ನೆಡಲಾಯಿತು.

Related posts

ಏ.12: ನೂರಾಳ್ ಬೆಟ್ಟು ಶ್ರೀ ಮಹಾಗಣಪತಿ ದೇವರ ಮೂರ್ತಿ ಪ್ರತಿಷ್ಠೆ ಕಲಶಾಭಿಷೇಕ – ಆಶ್ಲೇಷ ಪೂಜೆ

Suddi Udaya

ಕಲ್ಮಂಜ: ಪುಟಾಣಿ ಮಕ್ಕಳ ನೂತನ ‘ಸದಾಶಿವೇಶ್ವರ’ ಭಜನಾ ತಂಡ ರಚನೆ

Suddi Udaya

ಇಂದಬೆಟ್ಟು ಎಮ್.ಜೆ.ಎಮ್ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಕಡಿರುದ್ಯಾವರ: ಪಣಿಕಲ್ಲು ಎಂಬಲ್ಲಿ ತೋಟಕ್ಕೆ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಜ.10-11: ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವರ ಸನ್ನಿಧಿಯಲ್ಲಿ ಲೋಕಕಲ್ಯಾಣಾರ್ಥವಾಗಿ ನಾಗಬ್ರಹ್ಮಮಂಡಲೋತ್ಸವ

Suddi Udaya

ಗುರುವಾಯನಕೆರೆ: ವಿದ್ಯಾರ್ಥಿಯ ಅಗತ್ಯ ದಾಖಲೆ ಪತ್ರವಿದ್ದ ಬ್ಯಾಗ್ ಕಳೆದು ಹೋಗಿದ್ದು ಸಿಕ್ಕಿದವರು ಸಹಕರಿಸುವಂತೆ ಮನವಿ

Suddi Udaya
error: Content is protected !!