25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುರ್ಯ ದೇವಸ್ಥಾನದ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆ

ನಡ: ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಸದಾಶಿವರುದ್ರ ದೇವಸ್ಥಾನದ ವಠಾರದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ಬೆಳ್ತಂಗಡಿ ವಲಯ ಹಾಗೂ ಸುರ್ಯ ದೇವಸ್ಥಾನದ ಆಶ್ರಯದಲ್ಲಿ “ವಿಶ್ವ ಪರಿಸರ ದಿನ ” ಆಚರಿಸಲಾಯಿತು.

ಸುರ್ಯ ದೇವಸ್ಥಾನದ ಆನುವಂಶಿಯ ಆಡಳಿತ ಮೊಕ್ತೇಸರ ಡಾ. ಸತೀಶ್ಚಂದ್ರ ಸುರ್ಯಗುತ್ತು ಸಸಿ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಡಾ. ಸತೀಶ್ಚಂದ್ರ ಹಾಗೂ ವಿದ್ಯಾ. ಪಿ. ಡಿ. ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ (ಸಾಮಾಜಿಕ ಅರಣ್ಯ ಇಲಾಖೆ ) ಇವರು ಪರಿಸರ ಸಂರಕ್ಷಣೆ ಹಾಗೂ ಸಾಮಾಜಿಕ ಅರಣ್ಯಕರಣದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಅರಣ್ಯಧಿಕಾರಿ ಅಶೋಕ್, ಇಲಾಖೆ ಸಿಬ್ಬಂದಿ ಶೇಖರ ಗೌಡ, ನಡ ಪಂಚಾಯತ್ ಮಾಜಿ ಅಧ್ಯಕ್ಷ ಮುನಿರಾಜ ಅಜ್ರಿ, ಪ್ರಸಾದ್, ಸುಂದರ ನಾಯ್ಕ, ಪದ್ಮನಾಭ ಗೌಡ, ಯೋಗೀಶ್ ಪೂಜಾರಿ ಹಾಜರಿದ್ದರು. ಮಾವು, ಹೆಬ್ಬಲಸು, ಸಂಪಿಗೆ, ನೇರಳೆ, ಶ್ರೀಗಂಧ, ಸೊರಗೆ , ಹೊಳೆ ದಾಸವಾಳ ಇತ್ಯಾದಿ ವಿವಿಧ ಬಗೆಯ ನೂರು ಗಿಡಗಳನ್ನು ಸುರ್ಯ ದೇವಸ್ಥಾನದ ವಠಾರದಲ್ಲಿ ನೆಡಲಾಯಿತು.

Related posts

ಎಸ್‌ಡಿಎಂ. ಶಿಕ್ಷಣ ಮಹಾವಿದ್ಯಾಲಯ(ಬಿ.ಎಡ್)ದಲ್ಲಿ ನಕ್ಕು ಬಿಡು ಬಾನಕ್ಕಿ ಗಜಲ್ ಸಂಕಲನ ಬಿಡುಗಡೆ ಮತ್ತು ಗಜಲ್ ರಚನಾ ಕಾರ್ಯಾಗಾರ

Suddi Udaya

ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya

ಜೆಇಇ ಫಲಿತಾಂಶ: ಎಕ್ಸೆಲ್ ಕಾಲೇಜಿಗೆ ಅಖಿಲ ಭಾರತ ರ‍್ಯಾಂಕ್ 57

Suddi Udaya

ಎಕ್ಸೆಲ್ ಕಾಲೇಜಿನ ಜೆಇಇ ಸಾಧಕರಿಗೆ ಗೌರವಾರ್ಪಣೆ, ನಗದು ಬಹುಮಾನ ಹಸ್ತಾಂತರ

Suddi Udaya

ಧರ್ಮಸ್ಥಳ: ಹಲ್ಲೆ, ಜೀವ ಬೆದರಿಕೆ ಆರೋಪ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!