ಜೂ.9: ಪಡಂಗಡಿಯಲ್ಲಿ ಉಚಿತ ವೈದ್ಯಕೀಯ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಾಗೂ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

Suddi Udaya

ಪಡಂಗಡಿ: ಶ್ರೀ ಸತ್ಯಸಾಯಿ ಸೇವಾ ಸಮಿತಿ, ಮಂಗಳೂರು ಗಾಂಧಿನಗರ ಈಶ್ವರಾಂಬಾ ಟ್ರಸ್ಟ್ (ರಿ.) ಇವರ ಆಶ್ರಯದಲ್ಲಿ ಹಾಗೂ ಪಡಂಗಡಿ ಗ್ರಾಮ ಪಂಚಾಯತ್, ಕೃಷಿ ಪತ್ತಿನ ಸಹಕಾರಿ ಸಂಘ ಪಡಂಗಡಿ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಪಡಂಗಡಿ ಇವರ ಸಹಯೋಗದೊಂದಿಗೆ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ, ದೇರಳಕಟ್ಟೆ ಇವರ ವೈದ್ಯರ ತಂಡದವರಿಂದ ಉಚಿತ ವೈದ್ಯಕೀಯ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಮತ್ತು ಸಮುದಾಯ ದಂತ ವಿಭಾಗ, ಯೇನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇಲ್ಲಿಯ ವೈದ್ಯರ ತಂಡದವರಿಂದ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಜೂ.9ರಂದು ಪಡಂಗಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

ಕಣ್ಣಿನ ತಪಾಸಣೆಗೆ ಬರುವವರು ಬೆಳಿಗ್ಗೆ 11.30ರೊಳಗೆ ಶಿಬಿರಕ್ಕೆ ಹಾಜರಾಗಬೇಕಾಗಿ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

error: Content is protected !!