23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರೋಡಿತ್ತಾಯಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಪುಸ್ತಕ ವಿತರಣೆ

ತೆಂಕಕಾರಂದೂರು ಸರಕಾರಿ ಪ್ರಾಥಮಿಕ ಶಾಲೆಯ ಸುಮಾರು 80 ವಿದ್ಯಾರ್ಥಿಗಳಿಗೆ ಶಾಲೆಯ ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ಉಚಿತವಾಗಿ ಬರೆಯುವ ಪುಸ್ತಕ, ಪೆನ್ನುಗಳನ್ನು ನೀಡಲಾಯಿತು.

ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷ ಕೆ. ವಸಂತ ಸಾಲಿಯಾನ್ ಕಾಪಿನಡ್ಕ, ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ಶೆಟ್ಟಿ ಅಳಿಮಾರು, ವಹಿಸಿದ್ದರು,

ಈ ವೇಳೆ ಹಿರಿಯ ಸಾಹಿತಿ ಗ್ರಾಮದವರೇ ಆದ ” ಮನುಶ್ರೀ ” ಪ್ರಶಸ್ತಿ ಪುರಸ್ಕೃತ ಪ. ರಾಮಕೃಷ್ಣ ಶಾಸ್ತ್ರಿಗಳನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ಮಾಜಿ ಸೈನಿಕರಾದ ರಾಮನಾಥ ರೈ ಗರಿಯಾರು, ಶಾಲಾ ಎಸ್. ಎಂ. ಡಿ. ಸಿ.ಅಧ್ಯಕ್ಷ ರಘುನಾಥ ಕಜ್ಜೇಲು, ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ದರು.

ಶಾಲಾ ಹಳೇ ವಿದ್ಯಾರ್ಥಿಯಾಗಿರುವ ಮುಸ್ತಫಾ ರವರ ಮುಂದಾಳತ್ವದಲ್ಲಿ ಹಾಗೂ ಎಲ್ಲಾ ಹಳೇ ವಿದ್ಯಾರ್ಥಿಗಳ ಸಹಕಾರದಲ್ಲಿ ಪುಸ್ತಕ ವಿತರಣೆ ನಡೆಯಿತು.

ಕಾರ್ಯಕ್ರಮವನ್ನು ಶಿಕ್ಷಕಿ ಜ್ಯೋತಿ ನಿರೂಪಿಸಿ, ಮುಖ್ಯೋಪಾಧ್ಯಾಯಿನಿ ಬೆನಡಿಕ್ಟ್ ಪಾಯ್ಸ್ ಸ್ವಾಗತಿಸಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ನವಾಜ್ ಗಿಂಡಾಡಿ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು, ಶಾಲಾ ಹಳೇ ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು, ಶಾಲಾ ಶಿಕ್ಷಕಿಯವರು ಉಪಸ್ಥಿತರಿದ್ದರು.

Related posts

ಕುಕ್ಕೇಡಿ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ನಾಳ ದೇಗುಲದ ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಎಸ್.ಎಮ್.ಎ. ಉಜಿರೆ ರೀಜನಲ್ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya

ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಗೌರವ ಪ್ರಶಸ್ತಿಗೆ ಆಯ್ಕೆ

Suddi Udaya

ಕಾಯರ್ತಡ್ಕ ಖ್ಯಾತ ವೈದ್ಯ ಮಲಬಾರ್ ಕ್ಲಿನಿಕ್ ನ ಡಾ. ಟಿ.ವಿ ಜೋಸೆಫ್ ನಿಧನ

Suddi Udaya
error: Content is protected !!