July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರೋಡಿತ್ತಾಯಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಪುಸ್ತಕ ವಿತರಣೆ

ತೆಂಕಕಾರಂದೂರು ಸರಕಾರಿ ಪ್ರಾಥಮಿಕ ಶಾಲೆಯ ಸುಮಾರು 80 ವಿದ್ಯಾರ್ಥಿಗಳಿಗೆ ಶಾಲೆಯ ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ಉಚಿತವಾಗಿ ಬರೆಯುವ ಪುಸ್ತಕ, ಪೆನ್ನುಗಳನ್ನು ನೀಡಲಾಯಿತು.

ಕಾರ್ಯಕ್ರಮವನ್ನು ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷ ಕೆ. ವಸಂತ ಸಾಲಿಯಾನ್ ಕಾಪಿನಡ್ಕ, ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ಶೆಟ್ಟಿ ಅಳಿಮಾರು, ವಹಿಸಿದ್ದರು,

ಈ ವೇಳೆ ಹಿರಿಯ ಸಾಹಿತಿ ಗ್ರಾಮದವರೇ ಆದ ” ಮನುಶ್ರೀ ” ಪ್ರಶಸ್ತಿ ಪುರಸ್ಕೃತ ಪ. ರಾಮಕೃಷ್ಣ ಶಾಸ್ತ್ರಿಗಳನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ಮಾಜಿ ಸೈನಿಕರಾದ ರಾಮನಾಥ ರೈ ಗರಿಯಾರು, ಶಾಲಾ ಎಸ್. ಎಂ. ಡಿ. ಸಿ.ಅಧ್ಯಕ್ಷ ರಘುನಾಥ ಕಜ್ಜೇಲು, ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ದರು.

ಶಾಲಾ ಹಳೇ ವಿದ್ಯಾರ್ಥಿಯಾಗಿರುವ ಮುಸ್ತಫಾ ರವರ ಮುಂದಾಳತ್ವದಲ್ಲಿ ಹಾಗೂ ಎಲ್ಲಾ ಹಳೇ ವಿದ್ಯಾರ್ಥಿಗಳ ಸಹಕಾರದಲ್ಲಿ ಪುಸ್ತಕ ವಿತರಣೆ ನಡೆಯಿತು.

ಕಾರ್ಯಕ್ರಮವನ್ನು ಶಿಕ್ಷಕಿ ಜ್ಯೋತಿ ನಿರೂಪಿಸಿ, ಮುಖ್ಯೋಪಾಧ್ಯಾಯಿನಿ ಬೆನಡಿಕ್ಟ್ ಪಾಯ್ಸ್ ಸ್ವಾಗತಿಸಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ನವಾಜ್ ಗಿಂಡಾಡಿ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು, ಶಾಲಾ ಹಳೇ ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು, ಶಾಲಾ ಶಿಕ್ಷಕಿಯವರು ಉಪಸ್ಥಿತರಿದ್ದರು.

Related posts

ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ : ಹಳೆಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಿಂತನಾ ದಿನಾಚರಣೆ

Suddi Udaya

ಬಂದಾರು: ಒಟೆಚ್ಚಾರ್ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ಪೆರಿಂಜೆ ಪಡ್ಡoದಡ್ಕ ನಿವಾಸಿ ಸಫೀಯಾ ನಿಧನ

Suddi Udaya

ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದ ಸೇತುವೆಯಿಲ್ಲದೆ ಶಿಶಿಲ- ಒಟ್ಲ ಭಾಗದ ಜನರಿಗೆ ಸಂಕಷ್ಟ: ಸೇತುವೆ ನಿರ್ಮಾಣಕ್ಕೆ ಒಟ್ಲ ಭಾಗದ ಜನರ ಒತ್ತಾಯ

Suddi Udaya

ಮುಂಡಾಜೆ: ಕೊಂಬಿನಡ್ಕ ಸ.ಕಿ.ಪ್ರಾ. ಶಾಲೆ ಎಸ್‌ಡಿಎಂಸಿ ಕಮಿಟಿ ಪುನರ್ ರಚನೆ

Suddi Udaya
error: Content is protected !!