23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ದಿ| ಉದಯಕುಮಾರ್ ಸ್ಮರಣಾರ್ಥ “ಸೂರ್ಯೋದಯ” ಕೃತಿ ಬಿಡುಗಡೆ

ಉಜಿರೆ: ಶ್ರಾವಕರ ಷಟ್ಕರ್ಮಗಳಾದ ದೇವರಪೂಜೆ, ಆರಾಧನೆ, ಗುರುಗಳಸೇವೆ, ಸ್ವಾಧ್ಯಾಯ ಮೊದಲಾದವುಗಳನ್ನು ಪರಿಶುದ್ಧ ಮನಸ್ಸಿನಿಂದ ನಿತ್ಯವೂ ಮಾಡಿದಾಗ, ಆತ್ಮನಿಗಂಟಿದ ಸಕಲ ಪಾಪಕರ್ಮಗಳ ಕೊಳೆ ಕಳೆದು ಆತ್ಮನೇ ಪರಮಾತ್ಮನಾಗುತ್ತಾನೆ. ಜನರೆಲ್ಲ ಜಿನರಾಗಬೇಕು. ಮೋಕ್ಷ ಪ್ರಾಪ್ತಿಯೇ ಬದುಕಿನ ಪರಮ ಗುರಿಯಾಗಬೇಕು ಎಂದು ಮೂಡಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು.


ಅವರು ಜೂ.7ರಂದು ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ಪುಂಜಾಲಕಟ್ಟೆ ಕಟ್ಟೆಮನೆ ಗುತ್ತು ದಿವಂಗತ ಉದಯಕುಮಾರ್ ಅವರ ಸ್ಮರಣಾರ್ಥ ಶಾಸ್ತ್ರದಾನಕ್ಕಾಗಿ ಪ್ರಕಟಿಸಿದ “ಸೂರ್ಯೋದಯ” ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.


ಕ್ರೋಧಾದಿ ಮಾನಕಷಾಯಗಳನ್ನು ತೊರೆದು ನಮ್ಮೊಳಗಿರುವ ವೀತರಾಗ ಸ್ವರೂಪಿ ಆತ್ಮನನ್ನು ಗುರುತಿಸಿಕೊಂಡು ಮೋಕ್ಷಪ್ರಾಪ್ತಿಗೆ ನಿರಂತರ ಪ್ರಯತ್ನಿಸಬೇಕು.
ಮೋಹನೀಯ ಕರ್ಮ ಎಲ್ಲಾ ಕರ್ಮಗಳ ರಾಜ. ದ್ರವ್ಯ, ಕ್ಷೇತ್ರ, ಕಾಲ, ಭವ ಮತ್ತು ಭಾವವನ್ನು ಹೊಂದಿಕೊAಡು ಚಾಕಚಕ್ಯತೆಯಿಂದ ಬದುಕಿನ ಎಲ್ಲಾ ಕಷ್ಟಗಳನ್ನು ತಾಳ್ಮೆಯಿಂದ ಎದುರಿಸಿ ಕರ್ಮ ಬಂಧವನ್ನು ತಡೆದು ಮೋಕ್ಷ ಪ್ರಾಪ್ತಿ ಮಾಡಿಕೊಳ್ಳಬೇಕು ಎಂದು ಸ್ವಾಮೀಜಿ ಸಲಹೆ ನೀಡಿದರು.
ಕಟ್ಟೆಮನೆ ಉದಯಕುಮಾರರ ಸೇವಾ ಮನೋಭಾವ, ಆದರ್ಶ ನಾಯಕತ್ವ, ಶ್ರಾವಕ ಧರ್ಮದ ಪರಿಪಾಲನೆಯನ್ನು ಸ್ವಾಮೀಜಿ ಶ್ಲಾಘಿಸಿದರು.


ಶಿಕ್ಷಕ ಧರಣೇಂದ್ರ ಕುಮಾರ್ ಸಭಾಕಾರ್ಯಕ್ರಮ ನಿರ್ವಹಣೆ ಮಾಡಿದರು.
ಭಗವಾನ್ ಶಾಂತಿನಾಥ ಸ್ವಾಮಿಗೆ 504 ಕಲಶ ಅಭಿಷೇಕ, ಮೂರೂ ಬಸದಿಗಳಲ್ಲಿ ಪಂಚಾಮೃತ ಅಭಿಷೇಕ ಮತ್ತು ಪದ್ಮಾವತಿ ಅಮ್ಮನವರಿಗೆ ವಿಶೇಷ ಪೂಜೆ ಹಾಗೂ ಬ್ರಹ್ಮಯಕ್ಷ ದೇವರಿಗೆ ವರಹ ಪೂಜೆ ನಡೆಯಿತು.
ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್, ಬಸದಿಯ ಆಡಳಿತ ಮೊಕ್ತೇಸರ ಕೆ. ಜಯವರ್ಮರಾಜ ಬಳ್ಳಾಲ್, ಡಾ. ಕೆ. ಜೀವಂಧರ ಬಳ್ಳಾಲ್, ಕೆ. ರಾಜವರ್ಮ ಬಳ್ಳಾಲ್, ಮಾಜಿ ಸಚಿವರುಗಳಾದ ಬಿ. ರಮಾನಾಥ ರೈ ಮತ್ತು ಅಭಯಚಂದ್ರ ಜೈನ್, ಕೆ. ಪ್ರಸನ್ನ ಕುಮಾರ್ ಬೆಳ್ತಂಗಡಿ, ಎಸ್.ಡಿ. ಸಂಪತ್‌ಸಾಮ್ರಾಜ್ಯ ಶಿರ್ತಾಡಿ, ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಎಸ್. ಸತೀಶ್ಚಂದ್ರ, ಬ್ಯಾಂಕ್ ಆಫ್ ಬರೋಡದ ನಿವೃತ್ತ ಪ್ರಬಂಧಕರುಗಳಾದ ಎಂ. ಜಿನರಾಜ ಶೆಟ್ಟಿ ಮತ್ತು ಮೋಹನ ಪಡಿವಾಳ್, ಕೆ.ಪಿ. ಜಗದೀಶ ಅಧಿಕಾರಿ ಮೂಡಬಿದ್ರೆ ಮೊದಲಾದವರು ಉಪಸ್ಥಿತರಿದ್ದರು.

Related posts

ಸೆ.13, 14 : ವಾಣಿ ಕಾಲೇಜಿನಲ್ಲಿ ತುಳು ಸಾಹಿತ್ಯ ರಚನಾ ಕಮ್ಮಟ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಟ

Suddi Udaya

ವಾಲಿಬಾಲ್ ಪಂದ್ಯಾಟ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ಹಾಗೂ ಪದ್ಮುಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಎರಡು ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ಉಜಿರೆ : ಪ್ರಗತಿ ಮಹಿಳಾ ಮಂಡಲ ನೇತೃತ್ವದಲ್ಲಿ ಚಿಲಿಪಿಲಿ 2024 ಬೇಸಿಗೆ ಶಿಬಿರದ ಸಮಾರೋಪ

Suddi Udaya

ನಡ ಸ.ಪ.ಪೂ. ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ “ರಾಷ್ಟ್ರಪತಿ ಪದಕ” ಪುರಸ್ಕೃತ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಗೆ ನುಡಿನಮನ

Suddi Udaya
error: Content is protected !!