22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಮಗುವಿಗೊಂದು ಮರ ಯೋಜನೆಗೆ ಮುಂದಾದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ

ಕೊಕ್ಕಡ: ವಿದ್ಯಾರ್ಥಿ ದೆಸೆಯಲ್ಲಿ ಗಿಡ ಮರಗಳ ಮಹತ್ವವನ್ನು ಅರಿತು, ಗಿಡಗಳನ್ನು ನೆಟ್ಟು ಪೋಷಿಸುವ ಕಾರ್ಯ ಪ್ರಸ್ತುತ ಕಾಲ ಘಟ್ಟದಲ್ಲಿ ಅತಿ ಅವಶ್ಯಕವಾಗಿದ್ದು, ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಣ ಮಾತ್ರವಲ್ಲದೆ ಪ್ರಕೃತಿಯೊಂದಿಗೆ ಬದುಕುವ ನೈಜ ಜೀವನ ಪದ್ಧತಿಯನ್ನು ತಿಳಿ ಹೇಳುವ ಕಾರ್ಯವು ನಡೆಯುತ್ತಿದೆ. ವಿದ್ಯಾರ್ಥಿಗಳ ಮೂಲಕ ಮನೆಯಲ್ಲಿ ಹಾಗೂ ಶಾಲೆಯಲ್ಲಿ ಗಿಡವನ್ನು ನೆಟ್ಟು ಪೋಷಿಸುವ ಕಾರ್ಯ ಮಾಡಲಾಗುತ್ತಿದೆ. ಶಾಲೆಯಲ್ಲಿ ಈಗಾಗಲೇ ಆಡಳಿತ ಸಮಿತಿ ಹಾಗೂ ಶಿಕ್ಷಕರು ಮಗುವಿಗೊಂದು ಮರ ಎನ್ನುವ ಯೋಜನೆಯನ್ನು ಹಾಕಿಕೊಂಡಿದೆ. ಈ ಯೋಜನೆಯಲ್ಲಿ ಪ್ರತಿ ಮಗುವು ಶಾಲೆಯಲ್ಲೊಂದು ಅಥವಾ ಮನೆಯಲ್ಲೊಂದು ಗಿಡ ನೆಟ್ಟು ಪೋಷಿಸುವ ಕಾರ್ಯ ಮಾಡಲಿದ್ದಾರೆ ಎಂದು ಶ್ರೀ ಕ್ಷೇತ್ರ ಸೌತಡ್ಕದ ನೈಮಿಷ ಹೌಸ್ ಆಫ್ ಸ್ಪೈಸಸ್ ನ ಮಾಲಕ ಬಾಲಕೃಷ್ಣ ನೈಮಿಷ ತಿಳಿಸಿದರು.


ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಪಟ್ರಮೆ ಗ್ರಾಮದ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯ ಆವರಣದಲ್ಲಿ ಗಿಡ ನೆಟ್ಟು ಅವರು ಮಾತನಾಡಿದರು.


ಸಂಸ್ಥೆಯ ಸಂಚಾಲಕ ಪ್ರಶಾಂತ್ ಶೆಟ್ಟಿ ದೇರಾಜೆ ಮಾತನಾಡಿ, ಗಿಡ ನೆಟ್ಟು ಪೋಷಿಸುವ ಕಾರ್ಯ ಕೇವಲ ಪರಿಸರ ದಿನಾಚರಣೆಗಷ್ಟೇ ಸೀಮಿತವಾಗಿರದೆ, ನಿರಂತರ ನಾವು ಪ್ರಕೃತಿಯೊಂದಿಗೆ ಸಂಬಂಧವನ್ನು ಇರಿಸಿಕೊಳ್ಳುವಂತಿರಬೇಕು ಎಂದರು.
ಮುಖ್ಯ ಶಿಕ್ಷಕ ಚಂದ್ರಶೇಖರ ಶೇಟ್ ಮಾತನಾಡಿ, ಶಾಲೆಯಲ್ಲಿ ಕಳೆದ ವರ್ಷವೂ ಹಲವು ಔಷಧಿಯ ಗಿಡಗಳನ್ನು ನೆಟ್ಟು ಪೋಷಿಸಿಕೊಂಡು ಬರಲಾಗುತ್ತಿದ್ದು, ಈ ವರ್ಷವೂ ಮುಂದುವರಿಸಿಕೊಂಡು ಹೋಗಲಿದ್ದೇವೆ ಎಂದರು.
ವಿದ್ಯಾರ್ಥಿಗಳ ಮನೆಯಿಂದ ತಂದಿರುವ ಗಿಡಗಳನ್ನು ಶಾಲಾ ತೋಟದಲ್ಲಿ ನೆಡಲಾಯಿತು. ಈ ಸಂದರ್ಭ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಜೊತೆಗಿದ್ದರು.

Related posts

ಪಣಕಜೆ ‌ಭಜನಾ ಮಂದಿರದ ಬಳಿ ನಡೆದ ಅಪಘಾತದಲ್ಲಿ ರಸ್ತೆ ಚರಂಡಿಗೆ ಬಿದ್ದ ಸ್ಕೂಟರ್

Suddi Udaya

ನಿಡ್ಲೆ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಟೋಚಾಲಕ

Suddi Udaya

ಸೌತಡ್ಕ ಶ್ರೀ ಮಹಾ ಗಣಪತಿ ಕ್ಷೇತ್ರಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya

ಕರಾಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಬೊಮ್ಮಯ ಬಂಗೇರ ಆಯ್ಕೆ

Suddi Udaya

ಶ್ರೀ ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿ ಕಲ್ಲು ಮಜಲು ಗ್ರಾಮಸ್ಥರಿಂದ ಕಡಿರ ನಾಗನಕಟ್ಟೆ ನಿರ್ಮಿಸಿದ ಶಿಲ್ಪಿಗೆ ದೇಣಿಗೆ ಹಸ್ತಾಂತರ

Suddi Udaya

ನಿಡ್ಲೆ ಪ್ರಾ. ಕೃ.ಪ. ಸ. ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!